ನಾಡಗೀತೆಯಲ್ಲಿ ದೋಷ: ಪಾಟೀಲ ಪುಟ್ಟಪ್ಪ ತಕರಾರು

ನಾಡಗೀತೆಯಲ್ಲಿ ಹಲವು ಲೋಪದೋಷಗಳಿವೆ ಎಂದು ಹೇಳತೊಡಗಿದ ಪಾಪು, ಹಲವು ವ್ಯತ್ಯಯಗಳನ್ನು ಬಿಡಿಸಿಟ್ಟರು. 'ತೈಲಪ ಹೊಯ್ಸಳರಾಳಿದ ನಾಡೆ' ಎಂದು ಹೇಳಲಾಗಿದೆ. ಆದರೆ, ತೈಲಪ ಹೊಯ್ಸಳರು ಸಾಮಾನ್ಯ ದೊರೆಗಳು. ವಿಜಯನಗರದ ದೊರೆ, ರಾಷ್ಟ್ರಕೂಟರು, ಚಾಲುಕ್ಯರಂತಹ ದೊರೆಗಳ ಹೆಸರು ಎಲ್ಲಿದೆ? ನದಿ, ವನಗಳ ನಾಡೆ ಎಂದು ಬರೆದಿದ್ದಾರೆ. ನದಿ, ವನಗಳು ಕೇವಲ ಕರ್ನಾಟಕದಲ್ಲಷ್ಟೇ ಇಲ್ಲ. ಬೇರೆ ರಾಜ್ಯಗಳಲ್ಲೂ ಇವೆ. 'ಜನಕನ ಹೋಲುವ ದೊರೆಗಳ ಧಾಮ' ಎಂದೂ ಪದ್ಯದಲ್ಲಿ ಬಣ್ಣಿಸಲಾಗಿದೆ. ಜನಕನನ್ನು ಹೋಲುವ ದೊರೆಗಳು ಯಾರಿದ್ದಾರೆ.
ಅಷ್ಟಕ್ಕೂ ಕುವೆಂಪು ಈ ಪದ್ಯವನ್ನು ಬರೆಯುವ ವೇಳೆ 24 ವರ್ಷದವರಾಗಿದ್ದರು. ಅವರು ಈ ವಯಸ್ಸಿನಲ್ಲಿ ಬರೆದ ಪದ್ಯದಲ್ಲಿ ಎಲ್ಲೂ ಗಾಂಧೀಜಿ ಹೆಸರಿಲ್ಲ. ಮಹಾತ್ಮ ಗಾಂಧಿಯವರ ಹೆಸರಿಲ್ಲದ ನಾಡಗೀತೆಯನ್ನು ತಾವು ಒಪ್ಪುವುದಿಲ್ಲ. 7 ನಿಮಿಷದ ಈ ಹಾಡನ್ನು ಸಂಗೀತ ನುಡಿಸಿ, ಅನವಶ್ಯಕವಾಗಿ ಎಳೆಯಲಾಗುತ್ತದೆ ಎಂದೂ ನಾಡೋಜ ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. ಸೋಜಿಗವೆಂದರೆ ನಮ್ಮ ನಾಡಗೀತೆ ಆಗಾಗ ವಿವಾದದ ಬಿರುಗಾಳಿಯನ್ನು ಎಬ್ಬಿಸುತ್ತಲೇ ಇದೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications