ಬೆಂಗಳೂರಿಗೆ ತೊರೆಕಾಡನಹಳ್ಳಿಯಿಂದ ನೀರು ಪೂರೈಕೆ

ಇದನ್ನು ಮನಗಂಡಿರುವ ಸರಕಾರ ಮಂಡ್ಯ ಜಿಲ್ಲೆಯ ತೊರೆಕಾಡನಹಳ್ಳಿ ಜಲಾಶಯದಿಂದ 500 ಎಮ್ಎಲ್ ಡಿ ನೀರನ್ನು ನಗರಕ್ಕೆ ಪೂರೈಸುವ ಯೋಜನೆಯನ್ನು ಸರಕಾರ ಹಾಕಿಕೊಂಡಿದ್ದು, ಇದರಿಂದ ತುಸುಮಟ್ಟಿಗಾದರೂ ನೀರಿಗಾಗಿ ಹಾಹಾಕಾರ ನಿಲ್ಲುವುದೆಂಬ ಆಶಯವಿದೆ ಎಂದು ಭೂ ಹಗರಣದ ಆರೋಪ ಹೊತ್ತಿರುವ ಮಾಜಿ ಐಟಿಬಿಟಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಮಂಗಳವಾರ ಹೇಳಿದ್ದಾರೆ.
ನಗರದ ಕಾವಲ್ ಭೈರಸಂದ್ರ ವಾರ್ಡ್ ನಲ್ಲಿ ಕೆಂಪೇಗೌಡ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ತೊರೆಕಾಡನಹಳ್ಳಿ ಜಲಾಶಯದಿಂದ ನೀರು ತರುವುದರ ಜೊತೆಗೆ ಕೃಷ್ಣಾ ಮತ್ತು ನೇತ್ರಾವತಿ ನದಿ ತಿರುವು ಯೋಜನೆಗಳಿಂದಲೂ ನಗರಕ್ಕೆ ನೀರನ್ನು ಹರಿಸುವ ಪ್ರಯತ್ನ ನಡೆಯುತ್ತಿದೆ ಎಂದು ನುಡಿದರು. ಇದಕ್ಕಾಗಿ ಬಿಡಿಎ ಮತ್ತು ಬಿಬಿಎಂಪಿಗಳು ಕೊಟ್ಯಂತರ ರು. ವೆಚ್ಚ ಮಾಡುತ್ತಿವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹಾಜರಿದ್ದ ಸಂಸದ ಡಿಬಿ ಚಂದ್ರೇಗೌಡ ಅವರು, ಕೆಂಪೇಗೌಡರು ಬೆಂಗಳೂರಿನಲ್ಲಿ ನಿರ್ಮಿಸಿದ್ದ 130 ಕೆರೆಗಳಲ್ಲಿ ಇಂದು ಬೆರಳೆಣಿಕೆಯ ಕೆರೆಗಳು ಮಾತ್ರ ಇವೆ. ಉಳಿದವು ಬರಿದಾಗಿವೆ, ಇಲ್ಲ ಕಬಳಿಸಲ್ಪಟ್ಟಿವೆ. ಇದರಿಂದಾಗಿ ಅಂತರ್ಜಲದ ಮಟ್ಟ ಬೆಂಗಳೂರಿನಲ್ಲಿ ಭಾರೀ ಕುಸಿದಿದೆ. ಇರುವ ಕೆರೆಗಳನ್ನಾದರೂ ಕಾಪಾಡುತ್ತೇವೆಂಬ ಪ್ರತಿಜ್ಞೆಯನ್ನು ಜನರೇ ಮಾಡಬೇಕು ಎಂದು ಅವರು ಕೋರಿದರು.
ಟ್ಯಾಂಕರ್ ಗಳಿಂದ ನೀರು : ನೀರಿನ ಸರಿಯಾದ ಪೂರೈಕೆಯಿಲ್ಲದ ಬಡಾವಣೆಗಳಲ್ಲಿ ಟ್ಯಾಂಕರ್ ಗಳಿಂದ ನೀರು ಹಾಕಿಸಿಕೊಳ್ಳುವುದು ಸಾಮಾನ್ಯವಾಗಿದೆ. ಟ್ಯಾಂಕರ್ ನೀರಿಗೆ 250ರಿಂದ 300 ರು.ನಷ್ಟು ಹಣ ಕೀಳಲಾಗುತ್ತಿದೆ. ಕೇಳಿದಷ್ಟು ಹಣ ಪೀಕದೆ ಬೇರೆ ವಿಧಿಯೇ ಇಲ್ಲ ಎಂದು ಜನರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದೆಲ್ಲದರ ಜೊತೆಗೆ ಮಳೆನೀರು ಕೊಯ್ಲು ಮಾಡಿಸಲು ಜನರು ಹಿಂದೇಟು ಹಾಕುತ್ತಿರುವುದು ನೀರಿನ ಬವಣೆಯನ್ನು ಇನ್ನಷ್ಟು ಹೆಚ್ಚಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications