ಯಡಿಯೂರಪ್ಪ ವಿರುದ್ಧ ಪಕ್ಷಾತೀತ ಹೋರಾಟ:ಗೌಡ ಗುಡುಗು

ಈ ಜನಾಂದೋಲನ ಪೂರ್ವಭಾವಿ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ, ಮಾಜಿ ಸಚಿವರಾದ ಬೆಂಕಿ ಮಹಾದೇವು, ಬಿ.ಟಿ. ಲಲಿತಾ ನಾಯಕ್, ಶಿವಣ್ಣ ಮುಂತಾದ ಹಿರಿಯರು ಪಾಲ್ಗೊಂಡಿದ್ದಾರೆ. ಪ್ರಗತಿಪರರು, ದಲಿತ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ. ರಾಜ್ಯದ ಮೂಲೆ, ಮೂಲೆಗಳಲ್ಲಿ ನಡೆಯಲಿರುವ ಈ ಜನಾಂದೋಲನ ಹೇಗಿರಬೇಕು, ಆಂದೋಲನವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
ಯಡಿಯೂರಪ್ಪ ಅವರನ್ನು ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ ಎಂದು ಗೌಡರು ಹೇಳಿದ್ದಾರೆ. ಗಮನಾರ್ಹವೆಂದರೆ ಇದುವರೆಗೆ ಜಾತ್ಯತೀತ ಹೋರಾಟಕ್ಕೆ ಬದ್ಧರಾಗಿದ್ದ ಗೌಡರು ಈ ಬಾರಿ ಪಕ್ಷಾತೀತ ಹೋರಾಟಕ್ಕೆ ಅಣಿಯಾಗಿದ್ದು, ಎಲ್ಲ ಪಕ್ಷಗಳೂ ಇದರಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.












Click it and Unblock the Notifications