ಯಡಿಯೂರಪ್ಪ ವಿರುದ್ಧ ಪಕ್ಷಾತೀತ ಹೋರಾಟ:ಗೌಡ ಗುಡುಗು

Deve Gowda
ಬೆಂಗಳೂರು, ಮೇ 3: ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಹೋರಾಡಲು ಮಾಜಿ ಪ್ರಧಾನಿ ದೇವೇಗೌಡ ಮತ್ತೊಮ್ಮೆ ಟೊಂಕಕಟ್ಟಿ ನಿಂತಿದ್ದಾರೆ. ಈ ಸಂಬಂಧ ನಗರದ ಖಾಸಗಿ ಹೋಟೆಲ್ ನಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ಕಲಾವಿದರ ಸಭೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಈ ಬಾರಿ ರಾಜ್ಯಾದ್ಯಂತ ಪಕ್ಷಾತೀತವಾಗಿ ಹೋರಾಡುವುದಾಗಿ ದೇವೇಗೌಡರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಈ ಜನಾಂದೋಲನ ಪೂರ್ವಭಾವಿ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ, ಮಾಜಿ ಸಚಿವರಾದ ಬೆಂಕಿ ಮಹಾದೇವು, ಬಿ.ಟಿ. ಲಲಿತಾ ನಾಯಕ್, ಶಿವಣ್ಣ ಮುಂತಾದ ಹಿರಿಯರು ಪಾಲ್ಗೊಂಡಿದ್ದಾರೆ. ಪ್ರಗತಿಪರರು, ದಲಿತ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ. ರಾಜ್ಯದ ಮೂಲೆ, ಮೂಲೆಗಳಲ್ಲಿ ನಡೆಯಲಿರುವ ಈ ಜನಾಂದೋಲನ ಹೇಗಿರಬೇಕು, ಆಂದೋಲನವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.

ಯಡಿಯೂರಪ್ಪ ಅವರನ್ನು ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ ಎಂದು ಗೌಡರು ಹೇಳಿದ್ದಾರೆ. ಗಮನಾರ್ಹವೆಂದರೆ ಇದುವರೆಗೆ ಜಾತ್ಯತೀತ ಹೋರಾಟಕ್ಕೆ ಬದ್ಧರಾಗಿದ್ದ ಗೌಡರು ಈ ಬಾರಿ ಪಕ್ಷಾತೀತ ಹೋರಾಟಕ್ಕೆ ಅಣಿಯಾಗಿದ್ದು, ಎಲ್ಲ ಪಕ್ಷಗಳೂ ಇದರಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+