ಟಂಟಂ -ಟಿಪ್ಪರ್ ಮುಖಾಮುಖಿ: 11 ಕಾರ್ಮಿಕರ ದುರ್ಮರಣ

ಕೊಪ್ಪಳದ ಕೊಕೊನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅಪಘಾತ ಸಂಭವಿಸಿದೆ. ಟಂಟಂನಲ್ಲಿದ್ದ ಪ್ರಯಾಣಿಕರು ಬೊಮ್ಮಸಾಗರದ ತಾಂಡದವರು. ಇವರು ಸಮೀಪದಲ್ಲಿದ್ದ ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಟಂಟಂ ಗಾಡಿಗಳಲ್ಲಿ (ತ್ರಿಚಕ್ರ ವಾಹನ) ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಹೋಗುವುದರಿಂದ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗುತ್ತಿವೆ.












Click it and Unblock the Notifications