ಟಂಟಂ -ಟಿಪ್ಪರ್ ಮುಖಾಮುಖಿ: 11 ಕಾರ್ಮಿಕರ ದುರ್ಮರಣ
ಕೊಪ್ಪಳ,
ಮೇ 09: ಪ್ರಯಾಣಿಕರಿಂದ ತುಂಬಿತುಳುಕುತ್ತಿದ್ದ ಟಂಟಂ ಗಾಡಿ ಮತ್ತು ಟಿಪ್ಪರ್ ಲಾರಿ ಮಧ್ಯೆ ಸೋಮವಾರ ಬೆಳಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಮಂದಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಯಮನವ್ವ ಎಂಬ ಮಹಿಳೆ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ. ಈ ರಸ್ತೆ ಅಪಘಾತದಲ್ಲಿ 16 ಮಂದಿ ಗಾಯಗೊಂಡಿದ್ದಾರೆ. id="toptextpromo">ಕೊಪ್ಪಳದ
ಕೊಕೊನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ಅಪಘಾತ ಸಂಭವಿಸಿದೆ. ಟಂಟಂನಲ್ಲಿದ್ದ ಪ್ರಯಾಣಿಕರು ಬೊಮ್ಮಸಾಗರದ ತಾಂಡದವರು. ಇವರು ಸಮೀಪದಲ್ಲಿದ್ದ ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಟಂಟಂ
ಗಾಡಿಗಳಲ್ಲಿ (ತ್ರಿಚಕ್ರ ವಾಹನ) ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಹೋಗುವುದರಿಂದ ಇತ್ತೀಚಿನ ದಿನಗಳಲ್ಲಿ ಇಂತಹ ಅಪಘಾತಗಳು ಹೆಚ್ಚಾಗುತ್ತಿವೆ.











Click it and Unblock the Notifications