ಸಂಘದಿಂದ ವ್ಯಕ್ತಿ ಶಕ್ತಿಯಾಗಿ ಪರಿವರ್ತಿಸುವ ಕೆಲಸ

ಹೀಗೆ ವ್ಯಕ್ತಿಯನ್ನು ಶಕ್ತಿಯಾಗಿ ಪರಿವರ್ತಿಸುವ ಕೆಲಸ ಸಂಘ ಮಾಡುತ್ತಿದೆ. ಸಂಘದ ಈ ಕೆಲಸ ಹೊರಗಿನವರಿಗೆ ಸರಿಯಾಗಿ ತಿಳಿಯುತ್ತಿಲ್ಲ. ವ್ಯಕ್ತಿ ನಿರ್ಮಾಣದ ಕೆಲಸ ಈ ದೇಶದಲ್ಲಿ ಮಾತ್ರ ಈ ಪ್ರಮಾಣದಲ್ಲಿ ನಡೆಯುತ್ತಿದೆ. ಕುಟುಂಬ, ಸಮಾಜ, ದೇಶ ಪ್ರೇಮದ ಶಿಕ್ಷಣ ಪಡೆದ ಸ್ವಯಂಸೇವಕರು ಎಲ್ಲೆಡೆ ಸ್ಥಾನ ಪಡೆದರೆ ಎಲ್ಲ ಭೇದ ಭಾವಗಳು, ಅಪಾಯಗಳು ದೂರಾಗುವುದು ಖಂಡಿತ ಎಂದು ಭರವಸೆಯಿಂದ ನುಡಿದರು. ಅವರು ಬೆಂಗಳೂರು ಸಮೀಪದ ಚನ್ನೇನಹಳ್ಳಿಯ ಜನಸೇವಾ ವಿದ್ಯಾ ಕೇಂದ್ರದಲ್ಲಿ ನಡೆದ ಆರೆಸ್ಸೆಸ್ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಿದ್ದರು.
ಕರ್ನಾಟಕ ದಕ್ಷಿಣದ 378 ಸ್ಥಾನದಿಂದ 645 ಯುವಕರು, ಸಮಗ್ರ ಕರ್ನಾಟಕದ ಆಯ್ದ 32 ಸ್ಥಾನಗಳಿಂದ ಬಂದ 33 ಗಣ್ಯರು 20 ದಿನಗಳ ಪ್ರಥಮ ವರ್ಷದ ಶಿಕ್ಷಣ ಪಡೆದರು. ಇದೇ ಸಂದರ್ಭದಲ್ಲಿ ಕರ್ನಾಟಕ ದಕ್ಷಿಣದ 142 ಸ್ಥಾನಗಳಿಂದ ಬಂದ 180 ಕಾಲೇಜು ವಿದ್ಯಾರ್ಥಿಗಳು, ಅದರಲ್ಲಿ 33 ಅಧ್ಯಾಪಕರು ಇಲ್ಲಿ ಒಂದು ವಾರದ ಶಿಕ್ಷಣ ಪಡೆದಿದ್ದಾರೆ.
ಈ ತರಬೇತಿ ಶಿಬಿರಕ್ಕೆ ಶತಾವಧಾನಿ ಡಾ. ರಾ.ಗಣೇಶ್, ಸಮಾಜ ಮುಖಿ ಚಿಂತನೆಯ ಸಂತ ಪೇಜಾವರ ಶ್ರೀಗಳು ಮುಂತಾದ ಗಣ್ಯರು ಭೇಟಿ ನೀಡಿದ್ದಾರೆ. ಮೇ 1ರ ಭಾನುವಾರ ಬೆಂಗಳೂರಿನ 175 ಕುಟುಂಬಗಳ ತಾಯಂದಿರು ತಾವೇ ಅಡುಗೆ ಮಾಡಿ ತಂದು ತಾಯ್ತನದ ಪ್ರೀತಿಯನ್ನು ಶಿಬಿರಾರ್ಥಿಗಳಿಗೆ ಉಣಬಡಿಸಿದ್ದಾರೆ. ಸಹಜೀವನ ಸಾಮರಸ್ಯ ಮುಂತಾದ ಸದ್ಗುಣಗಳ ಶಿಕ್ಷಣವನ್ನು ನೀಡುವ ಈ ಶಿಬಿರ ಚೇತೋಹಾರಿಯಾಗಿತ್ತು. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ವಕೀಲರು, ವೈದ್ಯರು ಮುಂತಾದ ಸಮಾಜದ ಎಲ್ಲ ಕ್ಷೇತ್ರಗಳ ಶಿಬಿರಾರ್ಥಿಗಳು ಇಲ್ಲಿದ್ದುದು ವಿಶೇಷ.
ಸಮಾರೋಪ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹಸಂಪರ್ಕ ಪ್ರಮುಖರಾದ ಶ್ರೀಪಟ್ಟಾಭಿರಾಮ್, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯವನ್ನು ಸಂಘ ಕೈಗೆತ್ತಿಕೊಂಡಿದೆ. ಇಲ್ಲಿ ವ್ಯಕ್ತಿ ಸುಖದ ಕಲ್ಪನೆಯಿಲ್ಲ. ಬದಲಾಗಿ ರಾಷ್ಟ್ರ ಸುಖ – ವೈಭವದ ಸಾಧನೆಯೇ ಗುರಿ. ಅದಕ್ಕಾಗಿ ವ್ಯಕ್ತಿ ವ್ಯಕ್ತಿಗಳನ್ನು ಜೋಡಿಸಿ, ಸಂಸ್ಕಾರ ನೀಡಿ ಅವರ ಮೂಲಕ ಗುರಿಸಾಧನೆಯ ಕನಸನ್ನು ಸಂಘ ಕಂಡಿದೆ. ಅದಕ್ಕಾಗಿ ಶಿಕ್ಷಣ, ಸಂಸ್ಕಾರ, ತರಬೇತಿ ನೀಡುತ್ತಿದೆ ಎಂದರು. ಶಿಬಿರಾರ್ಥಿಗಳಿಂದ ಆಕರ್ಷಕ ಶಾರೀರಿಕ ಪ್ರದರ್ಶನ, 'ಭೋಗ ಮೆಟ್ಟಿ ತ್ಯಾಗ ಮೆರೆದ ಜನ್ಮ ಭೂಮಿ ಭಾರತ' ಈ ಗೀತೆ ನೆರೆದವರ ಮನ ಸೂರೆಗೊಂಡಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications