ಅಧಿಕಾರ ದುರುಪಯೋಗ ಸಾಬೀತಾದರೆ ನೇಣಿಗೆ ಶರಣಾಗುವೆ

ಜಾತ್ಯತೀತ ಜನತಾದಳ ಪರಿವಾರದ ನಾಯಕರೂ ಆದ ಕುಮಾರಸ್ವಾಮಿ ಅವರು ಭಾನುವಾರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತಾ ಯಡಿಯೂರಪ್ಪಗೆ ಈ ಸವಾಲು ಹಾಕಿದ್ದಾರೆ. ಯಡಿಯೂರಪ್ಪ ಅವರ ಭ್ರಷ್ಟಾಚಾರದ ವಿರುದ್ಧ ಜೆಡಿಎಸ್ ಈ ವ್ಯಾಪಕ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದೆ.
ನಮ್ಮ ಕುಟುಂಬದ ವಿರುದ್ಧ ಅಪಪ್ರಚಾರ ಮಾಡಲು ಸರಕಾರದ ವೇತನ ನೀಡಿ, ಒಬ್ಬರನ್ನು ನೇಮಕ ಮಾಡಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿದ್ದಾರೆ. ಇದಕ್ಕೆ ನಾನು ಬಗ್ಗುವುದಿಲ್ಲ. ನಮ್ಮ ವಿರುದ್ಧ ದಾಖಲೆಗಳಿವೆ ಎಂದು ಬಜೆಟ್ ಅಧಿವೇಶನದಲ್ಲಿ ಸೂಟ್ ಕೇಸ್ ತೋರಿಸಿದರು. ನಂತರ ನಾವು ಅಧಿಕಾರ ದುರುಪಯೋಗ ಮಾಡಿಕೊಂಡು ಗೋಮಾಳ ಭೂಮಿ ಕಬಳಿಸಿರುವುದಾಗಿ ಯಡಿಯೂರಪ್ಪನವರು ಬೊಬ್ಬೆ ಹೊಡೆದರು. ಒಂದು ವಾರದೊಳಗೆ ಅದನ್ನು ಸರಕಾರ ವಶಕ್ಕೆ ತೆಗೆದುಕೊಂಡು ದಲಿತರಿಗೆ ಹಂಚುವುದಾಗಿ ಪ್ರಕಟಿಸಿದರು.
ಯಾವುದನ್ನೂ ಮಾಡಿ ತೋರಿಸಿಲ್ಲ. ಸುಮ್ಮನೇ ವಾಗ್ದಾಳಿ ನಡೆಸುತ್ತಾರೆಯೇ ಹೊರತು ಆಡಳಿತಾರೂಢರಾಗಿದ್ದುಕೊಂಡೂ ಯಾವುದೇ ತನಿಖೆ ಮಾಡಿ ಕ್ರಮ ಕೈಗೊಂಡಿಲ್ಲ ಬೊಗಳೆ ಬಿಡುವ ಬದಲು ಆರೋಪ ಸಾಬೀತುಪಡಿಸಲಿ, ನಾನೇ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ' ಎಂದು ಕುಮಾರಸ್ವಾಮಿ ಅವರು ಘೋಷಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications