ಮಕ್ಕಳ ತೊರೆದು ಬನಶಂಕರಿಯಲ್ಲಿ ದಂಪತಿ ಆತ್ಮಹತ್ಯೆ

ಮರುದಿನ ನಡೆದ ಘಟನೆ ಮಾತ್ರ ತಂದೆ ಮತ್ತು ಕುಟುಂಬದವರನ್ನು ದಂಗುಬಡಿಸಿರುವುದು ಮಾತ್ರವಲ್ಲ ಮುದ್ದು ಕಂದಮ್ಮಗಳಿಗೆ ಇನ್ನು ಮುಂದೆ ಅಪ್ಪ-ಅಮ್ಮನ ಪ್ರೀತಿ ಸಿಗದಂತೆ ಮಾಡಿದೆ. ಯಾರಿಗೆ ಯಾವ ಸೂಚನೆಯನ್ನೂ ನೀಡದೆ, ಯಾವುದೇ ಮರಣಪತ್ರವನ್ನು ಕೂಡ ಬರೆಯದೆ ಮಕ್ಕಳ ಅಪ್ಪ ಗಂಗಾಧರ (30), ಅಮ್ಮ ಕಾವ್ಯಾ (25) ಇಬ್ಬರೂ ನೇಣಿಗೆ ಶರಣಾಗಿ ಇಹಲೋಕ ತ್ಯಜಿಸಿದ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ಮಂಗಳವಾರ ಜರುಗಿದೆ.
ಮೂರು ವರ್ಷದ ಮಂಗಳಾ ಮತ್ತು ಎರಡು ವರ್ಷದ ದಿವ್ಯಾ ಬೆಳಗಿನ ಜಾವದಲ್ಲಿ ಕೆಲ ಹೊತ್ತಿನಿಂದ ಒಂದೇ ಸವನೆ ಅಳುತ್ತಿದ್ದುದನ್ನು ಗಮನಿಸಿದ ಪಕ್ಕದ ಮನೆಯ ಶಾಂತಮ್ಮ ಎಂಬುವವರು ಅವರಿರುವ ಕಟ್ಟಡದಲ್ಲೇ ಇರುವ ಮಕ್ಕಳ ಅಜ್ಜ ಮತ್ತು ಗಂಗಾಧರ ಅವರ ತಂದೆ ಬೈರಪ್ಪನವರಿಗೆ ತಿಳಿಸಿದ್ದಾರೆ. ಕಿಟಕಿಯಿಂದ ಇಣುಕಿ ನೋಡಿದಾಗ ಗಂಗಾಧರ ಮತ್ತು ಕಾವ್ಯಾ ಮನೆಯಲ್ಲಿ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಕೂಡಲೆ ಪೊಲೀಸರಿಗೆ ತಿಳಿಸಿದ್ದಾರೆ.
ಆತ್ಮಹತ್ಯೆಯಂಥ ಹೀನ ಕೃತ್ಯಕ್ಕಿಳಿಯಲು ಅವರಿಬ್ಬರಿಗೆ ಯಾವುದೇ ಕಾರಣಗಳಿರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ ಎಂದು ತಂದೆ ಭೈರಪ್ಪ ಪೊಲೀಸರಿಗೆ ತಿಳಿಸಿದ್ದಾರೆ. ತನಿಖೆ ನಡೆಸಿರುವ ಪೊಲೀಸರ ಪ್ರಕಾರ, ಗಂಗಾಧರ ಇತ್ತೀಚೆಗೆ ಬೆಳ್ಳಿ ಆಭರಣಗಳನ್ನು ಗಿರವಿ ಇಟ್ಟಿದ್ದ. ಉತ್ತಮ ಸ್ವಭಾವದವನಾಗಿದ್ದ ಗಂಗಾಧರ ಮತ್ತು ಕಾವ್ಯಾ ನಡುವೆ ದಾಂಪತ್ಯದ ಬಿರುಕೂ ಇರಲಿಲ್ಲ. ಆದರೆ, ಅತ್ತೆಯಿಂದ ಕಾವ್ಯಾಳಿಗೆ ಆಗಾಗ ಕಿರುಕುಳವಾಗುತ್ತಿತ್ತು ಎಂದು ನೆರೆಹೊರೆಯವರು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಆತ್ಮಹತ್ಯೆಗಳ ನಗರವಾಗಿ ಪರಿವರ್ತಿತವಾಗುತ್ತಿದೆ. ಸಣ್ಣ ಕುಂದುಕೊರತೆಗಳೂ ಆತ್ಮಹತ್ಯೆಗಳಿಗೆ ಕಾರಣವಾಗುತ್ತಿವೆ. ಈ ಪ್ರಕರಣದಲ್ಲಂತೂ ಪುಟ್ಟ ಮಕ್ಕಳಿದ್ದಾರೆ ಎಂಬ ವಿವೇಚನೆಯೂ ಇಲ್ಲದೆ ಅಪ್ಪಅಮ್ಮಂದಿರು ನೆಮ್ಮದಿಯಿಂದ ಪರಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇನ್ನು ಮುಂದೆ ಮಕ್ಕಳನ್ನು ನೋಡಿಕೊಳ್ಳುವವರಾರು? ಅವರ ಭವಿಷ್ಯವೇನು? ಎಂಬ ಬಗ್ಗೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಿರ್ಮಲ ಮನಸ್ಸಿನಿಂದ ಯೋಚಿಸಿದ್ದರೆ ಈ ದುರಂತ ತಡೆಯಬಹುದಿತ್ತೇನೋ?
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications