ಕೊಡಗಿನಲ್ಲಿ ಇನ್ನು ಎಲ್ಲೆಂದರಲ್ಲಿ ವೈನ್ ಮಾರಾಟವಿಲ್ಲ

ಇದುವರೆಗೆ ಜಿಲ್ಲೆಯ ಕೆಲವರು ತಮ್ಮ ಮನೆಯಲ್ಲಿಯೇ ವೈನ್ ತಯಾರಿಸಿ ಮಾರಾಟ ಮಾಡುತ್ತಿದ್ದರು. ಶುಂಠಿ, ದ್ರಾಕ್ಷಿ, ನೆಲ್ಲಿಕಾಯಿ ಮೊದಲಾದವುಗಳಿಂದ ತಯಾರಿಸಲ್ಪಟ್ಟ ವೈನ್ಗಳು ವಿವಿಧ ಬಣ್ಣಗಳಿಂದ ಆಕರ್ಷಿಸುತ್ತಿದ್ದವು. ದೂರದಿಂದ ಬರುವ ಪ್ರವಾಸಿಗರು ಇಲ್ಲಿ ಸಿಗುವ ವೈನ್ನ್ನು ಸೇವಿಸುತ್ತಿದ್ದುದಲ್ಲದೆ ತಮ್ಮೊಂದಿಗೆ ಕೊಂಡೊಯ್ಯುತ್ತಿದ್ದರು. ವೈನ್ಗೆ ಹೆಚ್ಚಿನ ಬೇಡಿಕೆಯಿದ್ದುದರಿಂದ ಹಲವರು ತಮ್ಮ ಮನೆಯಲ್ಲಿಯೇ ತಯಾರು ಮಾಡುವ ಮೂಲಕ ಜೀವನೋಪಾಯಕ್ಕೊಂದು ಮಾರ್ಗ ಕಂಡುಕೊಂಡಿದ್ದರು. ಆದರೆ ಇನ್ನು ಮುಂದೆ ಅಬಕಾರಿ ಇಲಾಖೆಯ ಲೈಸೆನ್ಸ್ ಪಡೆಯುವುದು ಅಗತ್ಯವಾಗಿರುವುದರಿಂದ ಆತಂಕ ಸೃಷ್ಟಿಯಾಗಿದೆ.
ಹಾಗೆನೋಡಿದರೆ ಕೊಡಗಿಗೂ ವೈನ್ಗೂ ತಲತಲಾಂತರದ ನಂಟಿದೆ. ಇಲ್ಲಿ ನಡೆಯುವ ಎಲ್ಲಾ ಸಮಾರಂಭಗಳಲ್ಲಿಯೂ ಮದ್ಯದೊಂದಿಗೆ ವೈನ್ ಬಳಕೆಯಾಗುತ್ತಿದೆ. ಹಿಂದಿನ ಕಾಲದಲ್ಲಿ ಕೆಲವರು ತಮ್ಮ ಬಳಕೆಗೆ ತಾವೇ ವೈನ್ನ್ನು ತಯಾರಿಸಿಕೊಳ್ಳುತ್ತಿದ್ದರು. ನಂತರದ ದಿನಗಳಲ್ಲಿ ಹೋಂಸ್ಟೇ ಸಂಸ್ಕೃತಿ ಜಿಲ್ಲೆಗೆ ಅಡಿಯಿಟ್ಟ ಬಳಿಕ ದೂರದ ಪ್ರವಾಸಿಗರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರತೊಡಗಿದರು. ಅವರಿಗೆ ಕೊಡಗಿನ ಸಾಂಪ್ರದಾಯಿಕ ತಿನಿಸುಗಳೊಂದಿಗೆ ವೈನ್ನ್ನು ಕೂಡ ನೀಡುವ ಪರಿಪಾಠ ಆರಂಭಿಸಲಾಯಿತು.
ಕೊಡಗಿನ ವೈನ್ ಪ್ರವಾಸಿಗರನ್ನು ಆಕರ್ಷಿಸಲು ಹೆಚ್ಚು ಸಮಯ ಬೇಕಾಗಲಿಲ್ಲ. ಯಾವಾಗ ವೈನ್ಗೆ ಬೇಡಿಕೆ ಹೆಚ್ಚಾಯಿತೋ ಅಂಗಡಿಗಳಲ್ಲಿ ವಿವಿಧ ಬಗೆಯ ವೈನ್ಗಳು ಮಾರಾಟಕ್ಕೆ ಬಂದವು. ಇದು ಹೀಗೆಯೇ ಮುಂದುವರೆದರೆ ಏನೂ ಆಗುತ್ತಿರಲಿಲ್ಲ. ಆದರೆ ಕೆಲವು ಕಿಡಿಗೇಡಿಗಳು ವೈನ್ಗೆ ಅಲ್ಕೋಹಾಲ್ ಇರುವ ರಾಸಾಯನಿಕವನ್ನು ಬೆರೆಸಿ ಮಾರಾಟ ಮಾಡತೊಡಗಿದ್ದರು. ಇದು ಅಬಕಾರಿ ಇಲಾಖೆಯ ಗಮನಕ್ಕೆ ಬಂದು ವೈನ್ನ್ನು ಪರೀಕ್ಷೆಗೊಳಪಡಿಸಿದಾಗ ಅಲ್ಕೋಹಾಲ್ನ ಅಂಶವಿರುವುದು ಪತ್ತೆಯಾಗಿದೆ. ಹೀಗಾಗಿ ಇನ್ನು ಮುಂದೆ ವೈನ್ ತಯಾರು ಮಾಡುವವರು ಅಬಕಾರಿ ಇಲಾಖೆಯ ಲೈಸೆನ್ಸ್ ಪಡೆಯುವುದು ಅಗತ್ಯವಾಗಿದೆ. ಯಾರೋ ಮಾಡಿದ ಕಿಡಿಗೇಡಿತನಕ್ಕೆ ಇದೀಗ ವೈನ್ ತಯಾರಿಸಿ ಹೊಟ್ಟೆಪಾಡು ಕಳೆಯುತ್ತಿದ್ದ ಕೆಲವರು ತೊಂದರೆಗೀಡಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications