ಕೊಡಗಿನಲ್ಲಿ ಇನ್ನು ಎಲ್ಲೆಂದರಲ್ಲಿ ವೈನ್ ಮಾರಾಟವಿಲ್ಲ

ಇದುವರೆಗೆ ಜಿಲ್ಲೆಯ ಕೆಲವರು ತಮ್ಮ ಮನೆಯಲ್ಲಿಯೇ ವೈನ್ ತಯಾರಿಸಿ ಮಾರಾಟ ಮಾಡುತ್ತಿದ್ದರು. ಶುಂಠಿ, ದ್ರಾಕ್ಷಿ, ನೆಲ್ಲಿಕಾಯಿ ಮೊದಲಾದವುಗಳಿಂದ ತಯಾರಿಸಲ್ಪಟ್ಟ ವೈನ್ಗಳು ವಿವಿಧ ಬಣ್ಣಗಳಿಂದ ಆಕರ್ಷಿಸುತ್ತಿದ್ದವು. ದೂರದಿಂದ ಬರುವ ಪ್ರವಾಸಿಗರು ಇಲ್ಲಿ ಸಿಗುವ ವೈನ್ನ್ನು ಸೇವಿಸುತ್ತಿದ್ದುದಲ್ಲದೆ ತಮ್ಮೊಂದಿಗೆ ಕೊಂಡೊಯ್ಯುತ್ತಿದ್ದರು. ವೈನ್ಗೆ ಹೆಚ್ಚಿನ ಬೇಡಿಕೆಯಿದ್ದುದರಿಂದ ಹಲವರು ತಮ್ಮ ಮನೆಯಲ್ಲಿಯೇ ತಯಾರು ಮಾಡುವ ಮೂಲಕ ಜೀವನೋಪಾಯಕ್ಕೊಂದು ಮಾರ್ಗ ಕಂಡುಕೊಂಡಿದ್ದರು. ಆದರೆ ಇನ್ನು ಮುಂದೆ ಅಬಕಾರಿ ಇಲಾಖೆಯ ಲೈಸೆನ್ಸ್ ಪಡೆಯುವುದು ಅಗತ್ಯವಾಗಿರುವುದರಿಂದ ಆತಂಕ ಸೃಷ್ಟಿಯಾಗಿದೆ.
ಹಾಗೆನೋಡಿದರೆ ಕೊಡಗಿಗೂ ವೈನ್ಗೂ ತಲತಲಾಂತರದ ನಂಟಿದೆ. ಇಲ್ಲಿ ನಡೆಯುವ ಎಲ್ಲಾ ಸಮಾರಂಭಗಳಲ್ಲಿಯೂ ಮದ್ಯದೊಂದಿಗೆ ವೈನ್ ಬಳಕೆಯಾಗುತ್ತಿದೆ. ಹಿಂದಿನ ಕಾಲದಲ್ಲಿ ಕೆಲವರು ತಮ್ಮ ಬಳಕೆಗೆ ತಾವೇ ವೈನ್ನ್ನು ತಯಾರಿಸಿಕೊಳ್ಳುತ್ತಿದ್ದರು. ನಂತರದ ದಿನಗಳಲ್ಲಿ ಹೋಂಸ್ಟೇ ಸಂಸ್ಕೃತಿ ಜಿಲ್ಲೆಗೆ ಅಡಿಯಿಟ್ಟ ಬಳಿಕ ದೂರದ ಪ್ರವಾಸಿಗರು ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರತೊಡಗಿದರು. ಅವರಿಗೆ ಕೊಡಗಿನ ಸಾಂಪ್ರದಾಯಿಕ ತಿನಿಸುಗಳೊಂದಿಗೆ ವೈನ್ನ್ನು ಕೂಡ ನೀಡುವ ಪರಿಪಾಠ ಆರಂಭಿಸಲಾಯಿತು.
ಕೊಡಗಿನ ವೈನ್ ಪ್ರವಾಸಿಗರನ್ನು ಆಕರ್ಷಿಸಲು ಹೆಚ್ಚು ಸಮಯ ಬೇಕಾಗಲಿಲ್ಲ. ಯಾವಾಗ ವೈನ್ಗೆ ಬೇಡಿಕೆ ಹೆಚ್ಚಾಯಿತೋ ಅಂಗಡಿಗಳಲ್ಲಿ ವಿವಿಧ ಬಗೆಯ ವೈನ್ಗಳು ಮಾರಾಟಕ್ಕೆ ಬಂದವು. ಇದು ಹೀಗೆಯೇ ಮುಂದುವರೆದರೆ ಏನೂ ಆಗುತ್ತಿರಲಿಲ್ಲ. ಆದರೆ ಕೆಲವು ಕಿಡಿಗೇಡಿಗಳು ವೈನ್ಗೆ ಅಲ್ಕೋಹಾಲ್ ಇರುವ ರಾಸಾಯನಿಕವನ್ನು ಬೆರೆಸಿ ಮಾರಾಟ ಮಾಡತೊಡಗಿದ್ದರು. ಇದು ಅಬಕಾರಿ ಇಲಾಖೆಯ ಗಮನಕ್ಕೆ ಬಂದು ವೈನ್ನ್ನು ಪರೀಕ್ಷೆಗೊಳಪಡಿಸಿದಾಗ ಅಲ್ಕೋಹಾಲ್ನ ಅಂಶವಿರುವುದು ಪತ್ತೆಯಾಗಿದೆ. ಹೀಗಾಗಿ ಇನ್ನು ಮುಂದೆ ವೈನ್ ತಯಾರು ಮಾಡುವವರು ಅಬಕಾರಿ ಇಲಾಖೆಯ ಲೈಸೆನ್ಸ್ ಪಡೆಯುವುದು ಅಗತ್ಯವಾಗಿದೆ. ಯಾರೋ ಮಾಡಿದ ಕಿಡಿಗೇಡಿತನಕ್ಕೆ ಇದೀಗ ವೈನ್ ತಯಾರಿಸಿ ಹೊಟ್ಟೆಪಾಡು ಕಳೆಯುತ್ತಿದ್ದ ಕೆಲವರು ತೊಂದರೆಗೀಡಾಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications