ಕಾಶ್ಮೀರಿ ಪಂಡಿತ್ ಮಹಿಳೆಗೆ ಕಣಿವೆಯಲ್ಲಿ ಚೊಚ್ಚಲ ಗೆಲುವು

ಮುಸ್ಲಿಮರೇ ಹೆಚ್ಚಾಗಿ ವಾಸಿಸುವ ಪುಸ್ಸಾನ್ ಗ್ರಾಮದಲ್ಲಿ 52 ವರ್ಷದ ಆಯಿಷಾ ಜೀ ಅವರು ಜಯಮಾಲೆ ಧರಿಸಿದ್ದಾರೆ. ಸರವ ಬೇಗಂ ಅವರನ್ನು ಆಯಿಷಾ 11 ಮತಗಳಿಂದ ಸೋಲಿಸಿ ಗ್ರಾಮದ ಸರಪಂಚ್ ಆಗಿದ್ದಾರೆ. ಗ್ರಾಮದಲ್ಲಿ ಒಟ್ಟು 1,000 ಜನರಿದ್ದು, ಅವರಲ್ಲಿ ಕೇವಲ 11 ಮಂದಿ ಕಾಶ್ಮೀರಿ ಪಂಡಿತರು ವಾಸವಾಗಿದ್ದಾರೆ.
ಕಾಶ್ಮೀರದಲ್ಲಿ ಭಯೋತ್ಪಾದಕರ ಕಾಟ ತೀವ್ರವಾಗಿ 1990 ರಿಂದೀಚೆಗೆ ಪಂಡಿತ್ ಸಮುದಾಯದವರು ಕಣಿವೆಯನ್ನು ತೊರೆಯುತ್ತಿರುವಾಗ (ಇವರಲ್ಲಿ ಬಹಳಷ್ಟು ಮಂದಿ ಬೆಂಗಳೂರಿಗೆ ವಲಸೆ ಬಂದಿದ್ದಾರೆ) ಆಯಿಷಾ ಅವರು ತಮ್ಮ ಪತಿ ರಾಧಾಕೃಷ್ಣನ್ ಮತ್ತು ಇಬ್ಬರು ಪುತ್ರರ ಜತೆ ಗ್ರಾಮದಲ್ಲಿಯೇ ನೆಲೆನಿಂತಿದ್ದಾರೆ.
ಮೂರು ತಿಂಗಳ ಗ್ರಾಮ ಪಂಚಾಯಿತಿ ಚುನಾವಣೆಗೆ ಕಣಿವೆಯಲ್ಲಿ ಭಾರಿ ಜನಸ್ಪಂದನೆ ದೊರೆತಿದೆ. ಇದು ಕಳೆದ ಬಾರಿಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಾಗಿದೆ. ಈ ಹಿಂದೆ ಪಂಚಾಯಿತಿ ಚುನಾವಣೆಗಳು 2001ರಲ್ಲಿ ಜರುಗಿದ್ದವು. ಈ ಬಾರಿ 2,000 ಸರಪಂಚ್ ಗಳು ಮತ್ತು 15,000 ಪಂಚಾಯತ್ ಗಳು 15,000 ಕ್ಷೇತ್ರಗಳಿಂದ ಆಯ್ಕೆಯಾಗಲಿದ್ದಾರೆ. ಜೂನ್ 19ರಂದು ಚುನಾವಣೆ ಮುಗಿಯಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications