16 ಶಾಸಕರು ಅನರ್ಹರಲ್ಲ: ಬೋಪಯ್ಯ ಆದೇಶಕ್ಕೆ ಸೋಲು

ಇದರೊಂದಿಗೆ ಹದಿನಾರೂ ಶಾಸಕರು ತಮ್ಮ ಶಾಸಕತ್ವವನ್ನು ಉಳಿಸಿಕೊಂಡಂತಾಗಿದೆ. ಇವರೆಲ್ಲ ಜೆಡಿಎಸ್ ನಾಯಕರಾದ ಎಚ್ ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಅಲ್ತಮಸ್ ಕಬೀರ್ ಮತ್ತು ನ್ಯಾ. ಸಿರಿಯಾಕ್ ಜೋಸೆಫ್ ಅವರ ನ್ಯಾಯಪೀಠ ಶುಕ್ರವಾರ ಈ ತೀರ್ಪು ನೀಡಿದೆ. ಸ್ಪೀಕರ್ ಬೋಪಯ್ಯ ಕ್ರಮಕ್ಕೆ ಪೀಠ ತೀವ್ರವಾಗಿ ಕಿಡಿಕಾರಿದೆ. ಬೋಪಯ್ಯ ಅವರ ಸ್ಥಾನಕ್ಕೆ ಮುಳುಗುನೀರು ತಂದಿದೆ.
ಇದರಿಂದ ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ಭವಿಷ್ಯ ಡೋಲಾಯಮಾನವಾಗಿದೆ. ಬೆಳಗ್ಗೆಯಷ್ಟೇ ಚುನಾವಣೆ ಗೆಲುವಿನ ಅಲೆಯಲ್ಲಿ ಬೀಗುತ್ತಿದ್ದ ಯಡಿಯೂರಪ್ಪ ಈಗ ಬಿರುಗಾಳಿಗೆ ಸಿಕ್ಕಿಕೊಂಡಿದ್ದಾರೆ. ಬಿಜೆಪಿ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ. ರಾಜ್ಯ ರಾಜಕಾರಣದಲ್ಲಿ ಕೋಲಾಹಲ ವಾತಾವರಣ ಮೂಡಿದೆ.
11 ಬಿಜೆಪಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಆನಂದ್ ಆಸ್ನೋಟಿಕರ್, ಬಾಲಚಂದ್ರ ಜಾರಕಿಹೊಳಿ, ಬಿ.ಎನ್. ಸಾರ್ವಭೌಮ, ಬ್ರಹ್ಮಗೌಡ ಎಚ್. ಕಾಗೆ, ವೈ. ಸಂಪಂಗಿ, ಜಿ.ಎನ್. ನಂಜುಂಡಸ್ವಾಮಿ, ಎಂ.ವಿ. ನಾಗರಾಜು, ಶಿವಣ್ಣಗೌಡ ನಾಯಕ್, ಎಚ್.ಎಸ್. ಶಂಕರಲಿಂಗೇಗೌಡ ಮತ್ತು ಬೆಳ್ಳುಬ್ಬಿ ಸಂಗಪ್ಪ ಕಾಳಪ್ಪಗೆ ಜಯ ಸಿಕ್ಕಿದೆ. ಹಾಗೆಯೇ, 5 ಪಕ್ಷೇತರ ಶಾಸಕರಾದ ಪಿ.ಎಂ. ನರೇಂದ್ರ ಸ್ವಾಮಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ, ಡಿ. ಸುಧಾಕರ್ ಹಾಗೂ ಶಿವರಾಜ ತಂಗಡಗಿ ಅವರೂ ಗೆಲುವಿನ ನಗೆ ಬೀರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರಕಾರದ ವಿರುದ್ಧ 11 ಮಂದಿ ಬಿಜೆಪಿ ಶಾಸಕರು ಮತ್ತು 5 ಪಕ್ಷೇತರರು 2010ರ ಅಕ್ಟೋಬರ್ ನಲ್ಲಿ ಬಂಡೆದ್ದಿದ್ದರು. ಜತೆಗೆ ರಾಜ್ಯಪಾಲರಿಗೆ ಪತ್ರ ಬರೆದು ತಾವು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಬೆಂಬಲ ವಾಪಸ್ ಪಡೆದಿರುವುದಾಗಿ ತಿಳಿಸಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications