ಮೇ 13 ಯಡಿಯೂರಪ್ಪನವರಿಗೆ ಲಕ್ಕಿ ಆಗುವುದೆ?

ಇಂದು ಬೆಳಿಗ್ಗೆಯಿಂದ ಶುರುವಾಗಿರುವ ಮತಎಣಿಕೆಯಲ್ಲಿ ಕೆಲ ಸುತ್ತಿನ ಮತ ಎಣಿಕೆಗಳ ನಂತರ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಯಡಿಯೂರಪ್ಪನವರಲ್ಲಿ ಮಾಯವಾಗಿದ್ದ ಕಿರುನಗೆಯನ್ನು ಅಲ್ಪಪ್ರಮಾಣದಲ್ಲಿಯಾದರೂ ಮರುಕಳಿಸಿದೆ. ಮೂರೂ ಕ್ಷೇತ್ರಗಳಲ್ಲಿ ಗೆಲ್ಲಬೇಕಾಗಿರುವುದು ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ತುಂಬಾ ಅವಶ್ಯಕವಾಗಿದೆ.
[ಉಪಚುನಾವಣೆ ಜಯ ಲಕ್ಕಿ] [ಸುಪ್ರೀಂ ಕೋರ್ಟ್ ತೀರ್ಪು ಅನ್ ಲಕ್ಕಿ]
ನಾಲ್ಕನೇ ಸುತ್ತಿನ ಮತಎಣಿಕೆಯ ನಂತರ ಚನ್ನಪಟ್ಟಣದಲ್ಲಿ ಸಿಪಿ ಯೋಗೀಶ್ವರ್, ಬಂಗಾರಪೇಟೆಯಲ್ಲಿ ಎಂ ನಾರಾಯಣ ಸ್ವಾಮಿ ಮತ್ತು ಜಗಳೂರಿನಲ್ಲಿ ಎಸ್ ವಿ ರಾಮಚಂದ್ರ ತಮ್ಮ ಸಮೀಪದ ಹುರಿಯಾಳುಗಳಿಗಿಂತ ತುಸು ಮುನ್ನಡೆ ಸಾಧಿಸಿದ್ದಾರೆ. ರಾಮಚಂದ್ರ ಅವರು 3218 ಮತಗಳಿಂದ ಮುಂದೆ ಇದ್ದಾರೆ, ಯೋಗೀಶ್ವರ್ 4000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ನಾರಾಯಣ ಸ್ವಾಮಿ 2331 ಮತಗಳಿಂದ ಮುಂದೆ ಇದ್ದಾರೆ.
ಯಡಿಯೂರಪ್ಪನವರನ್ನು ಕೆಳಗಿಳಿಸಲು ಪಣತೊಟ್ಟಿರುವ ಜೆಡಿಎಸ್ ಇತ್ತೀಚೆಗೆ ಬೆಂಗಳೂರಿನಿಂದ ಯಡಿಯೂರಪ್ಪನವರ ತವರು ಜಿಲ್ಲೆಯಾದ ಶಿವಮೊಗ್ಗದವರೆಗೂ ಪಾದಯಾತ್ರೆ ನಡೆಸಿ, ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನ ನಡೆಸಿರುವುದಾಗಿ ಹೇಳಿದೆ. ಕಾಂಗ್ರೆಸ್ ಕೂಡ ರಾಜ್ಯಪಾಲರಿಗೆ ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದೆ.
ಬಿಜೆಪಿ ಹೈಕಮಾಂಡ್ ಕೂಡ ಉಪಚುನಾವಣೆ ಮುಗಿಯುವವರೆಗೆ ಯಡಿಯೂರಪ್ಪ ತಮ್ಮ ಕುರ್ಚಿಯಲ್ಲಿ ಕುಳಿತಿರಲಿ ಎಂದು ಭಿನ್ನಮತೀಯರಾದ ಈಶ್ವರಪ್ಪ, ಅನಂತಕುಮಾರ್, ಸಿಟಿ ರವಿ ಮುಂತಾದವರಿಗೆ ಸಮಾಧಾನ ಹೇಳಿ ಕಳಿಸಿತ್ತು. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದರೆ ಯಡಿಯೂರಪ್ಪ ಸ್ವಲ್ಪ ಕಾಲವಾದರೂ ನಿರಾಳವಾಗಿ ಉಸಿರಾಡಿಸಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications