ಯಡಿಯೂರಪ್ಪ ನಾಯಕತ್ವಕ್ಕೆ ಜೈ ಎಂದ ಭಿನ್ನರು?

ದೇಶದ ರಾಜಧಾನಿಯಲ್ಲಿ ಇಂದು ನಡೆದ ನಾಟಕೀಯ ಬೆಳವಣಿಗೆಗಳಲ್ಲಿ, ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಶಾಸಕರಾಗಿ ಅರ್ಹತೆ ಪಡೆದಿರುವ ಶಾಸಕರೆಲ್ಲ ಯಡಿಯೂರಪ್ಪನವರ ನಾಯಕತ್ವಕ್ಕೆ ಬೆಂಬಲ ನೀಡಿದ್ದು, ಭಾನುವಾರ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಈ ಕುರಿತು ಅಂತಿಮ ನಿರ್ಧಾರವನ್ನು ರಾಜ್ಯಪಾಲರಿಗೆ ಭಾನುವಾರ ತಿಳಿಸಲಿದ್ದಾರೆ.
ಭಿನ್ನಮತೀಯರ ಮನವೊಲಿಸಲು ರೇಣುಕಾಚಾರ್ಯ, ಗೋವಿಂದ ಕಾರಜೋಳ ಮತ್ತು ಉಮೇಶ್ ಕತ್ತಿ ನವದೆಹಲಿಗೆ ತೆರಳಿದ್ದರು. ಭಿನ್ನರ ಪರವಾಗಿ ಬಾಲಚಂದ್ರ ಜಾರಕಿಹೊಳಿ ಅವರು ಹಿರಿಯ ನಾಯಕ ಅರುಣ್ ಜೇಟ್ಲಿ ಮತ್ತು ರಾಜ್ಯದ ಉಸ್ತುವಾರಿ ವಹಿಸಿರುವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂಧಾನಕ್ಕೆ ಎಲ್ಲ ಭಿನ್ನರ ಬೆಂಬಲವಿದೆಯೆ ಎಂಬುದು ಮಾತ್ರ ತಿಳಿಯಬೇಕಿದೆ.
ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಕುಮಾರಸ್ವಾಮಿ ಅವರದು, ಮಳೆ ನಿಂತು ಹೋದ ಮೇಲೆ ಹನಿಯೊಂದು ಜಾರಿದೆ ಎಂಬಂತಹ ಸ್ಥಿತಿಯಾಗಿದೆ. ಬಿಜೆಪಿ ಜೊತೆ ಸಂಧಾನ ಪ್ರಕ್ರಿಯೆ ನಡೆದಿರುವುದು ಗೊತ್ತಾದಾಗ, ಅವರನ್ನು ಭೇಟಿಯಾಗಲು ಬಂದೇ ಇಲ್ಲ, ಸ್ವಂತ ಕಾರ್ಯಕ್ಕಾಗಿ ಬಂದಿದ್ದೆ. ಏನೇ ನಿರ್ಧಾರ ತೆಗೆದುಕೊಳ್ಳಲು ಅವರು ಸ್ವತಂತ್ರರು ಎಂಬ ಹಾರಿಕೆಯ ಜಾಣ ಉತ್ತರ ನೀಡಿದ್ದರು. ಮೇಲ್ನೋಟಕ್ಕೆ ಈ ಮಾತನಾಡಿದ್ದರೂ ಶಿವರಾಜ್ ತಂಗಡಗಿ ಸೇರಿದಂತೆ ಕೆಲ ಭಿನ್ನರನ್ನು ಅವರು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಯಡಿಯೂರಪ್ಪನವರು ಕೂಡ ತಮ್ಮ ಹಮ್ಮುಬಿಮ್ಮುಗಳನ್ನೆಲ್ಲ ಬದಿಗಿಟ್ಟು, 11 ಬಿಜೆಪಿ ಶಾಸಕರು ಮತ್ತು 5 ಪಕ್ಷೇತರ ಶಾಸಕರೊಡನೆ ಖುದ್ದಾಗಿ ಒಬ್ಬೊಬ್ಬರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಮಂತ್ರಿ ಪದವಿ, ನಿಗಮ ಮಂಡಳಿಯ ಅಧ್ಯಕ್ಷತೆ, ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಸಹಾಯಧನ ಮುಂತಾದ ಬೇಡಿಕೆಗಳನ್ನು ಶಿರಸಾವಹಿಸಿ ಈಡೇರಿಸುವ ಭರವಸೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ನೆವ ಮಾಡಿಕೊಂಡಿದ್ದ ಭಿನ್ನಮತೀಯರಿಗೂ ಬೇಕಾದದ್ದು ಇದೇ ಅಲ್ಲವೆ?
ಇಲ್ಲಿ ಬೆಂಗಳೂರಿನಲ್ಲಿ, ಬಿಜೆಪಿ ಸರಕಾರ ಬಿದ್ದೇಬಿಡುತ್ತದೆಂದು ಹಗಲುಗನಸು ಕಾಣುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕಾಂಗ್ರೆಸ್ ಪಾಳಯದಲ್ಲಿ ನಿರಾಶೆಯ ವಾತಾವರಣ ಮೂಡಿದೆ. ಈ ಅನಿರೀಕ್ಷಿತ ಬೆಳವಣಿಗೆಗಳಿಂದ ಕಾಂಗ್ರೆಸ್ ಮಾತ್ರವಲ್ಲ ಬಿಜೆಪಿ ಪಾಳಯದಲ್ಲೂ ಆತಂಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹಿಂದೆ ಇವರನ್ನು ವಾಚಾಮಗೋಚರವಾಗಿ ಬೈದಿದ್ದವರೇ ಮತ್ತೆ ಆಲಂಗಿಸಿಕೊಳ್ಳಲು ಒಪ್ಪುತ್ತಾರಾ? ಮಂತ್ರಿಗಿರಿಗಾಗಿಯೇ ಚಾತಕ ಪಕ್ಷಿಗಳಂತೆ ಕಾದಿರುವವರು ಭಿನ್ನರಿಗೆ ಅವಕಾಶ ಬಿಟ್ಟುಕೊಡಲು ತಯಾರಾಗುತ್ತಾರಾ? ಯಾರ ತಲೆ ಉರುಳಲಿದೆ, ಯಾರು ಅವಕಾಶ ಗಿಟ್ಟಿಸಲಿದ್ದಾರೆ... ಕಾಲವೇ ಉತ್ತರ ನೀಡಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications