ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ರಾಜ್ಯಪಾಲ ಶಿಫಾರಸು

ಈ ಹಿನ್ನೆಲೆಯಲ್ಲಿ ತಮ್ಮ ಸ್ವಗೃಹದಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲರು ಶಿಫಾರಸು ಮಾಡಿರುವುದು ಸಂವಿಧಾನಕ್ಕೆ ವಿರೋಧವಾಗಿದೆ. ಸರಕಾರಕ್ಕೆ ಬಹುಮತವಿದ್ದರೂ ವಿಧಾನಸಭೆಯನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಿರುವುದರ ಹಿಂದೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಹುನ್ನಾರ ಎದ್ದು ಕಾಣುತ್ತಿದೆ. ಈ ಶಿಫಾರಸನ್ನು ವಿರೋಧಿಸಿ ಮತ್ತು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಾಷ್ಟ್ರಪತಿಗೆ, ಪ್ರಧಾನಿಗೆ ಮತ್ತು ಗೃಹ ಸಚಿವಾಲಯಕ್ಕೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ಕರ್ನಾಟಕ ಪ್ರೀಮಿಯರ್ ಲೀಗ್ : ಯಡ್ಡಿ vs ರಾಜ್ಯಪಾಲ
ರಾಜ್ಯಪಾಲರ ಪತ್ರ ತಮಗೆ ತಲುಪಿದ್ದು, ಅದರಲ್ಲಿ ಬಿಜೆಪಿ ಸರಕಾರ ಕುದುರೆ ವ್ಯಾಪಾರದಲ್ಲಿ ನಿರತವಾಗಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ಮಾತು. ಪ್ರತಿಪಕ್ಷಗಳು ಸರಕಾರವನ್ನು ಉರುಳಿಸಲು ಮೇಲಿಂದ ಮೇಲೆ ಹುನ್ನಾರ ನಡೆಸುತ್ತಲೇ ಇದ್ದಾರೆ. ರಾಜ್ಯಪಾಲರು ಹೇಳಿದಂತೆ ರಾಜ್ಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವಂತೆ ನಾವು ನಡೆದುಕೊಂಡಿಲ್ಲ. ಮುನಿಸಿಕೊಂಡಿದ್ದ 11 ಶಾಸಕರು ಕೂಡ ತಮ್ಮೊಂದಿಗಿದ್ದಾರೆ ಎಂದು ಅವರು ನುಡಿದರು.
ನಮ್ಮ ಬಳಿ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯೆಯಿದೆ. ಯಾವುದೇ ಕಾರಣಕ್ಕೂ ಈ ಶಿಫಾರಸಿಗೆ ರಾಷ್ಟ್ರಪತಿ ಮತ್ತು ಕೇಂದ್ರ ಮಣಿಯಬಾರದು. ಒಂದು ವೇಳೆ ಕೇಂದ್ರ ಮಣಿದದ್ದೇ ಆದರೆ ಬಿಜೆಪಿ ಬೀದಿಗಿಳಿದು ಹೋರಾಟ ಮಾಡುತ್ತದೆ ಎಂದು ಯಡಿಯೂರಪ್ಪ ಕೆಂಡಕಾರಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲು ಸೋಮವಾರ, ಮೇ 16ರಂದು ಶಾಸಕಾಂಗ ಸಭೆ ಕರೆಯಲಾಗಿದೆ. ಹತ್ತು ದಿನಗಳ ವಿಧಾನಮಂಡಲದ ಅಧಿವೇಶನ ನಾಳೆಯಿಂದಲೇ ಆರಂಭವಾಗುತ್ತಿದೆ. ಕೇಂದ್ರದಲ್ಲಿ ಕೂಡ ಯುಪಿಎ ಸರಕಾರ ಸೋಮವಾರ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲು ತುರ್ತು ಸಂಪುಟ ಸಭೆಯನ್ನು ಕರೆದಿದೆ.
ಅನರ್ಹಗೊಂಡಿದ್ದ ಶಾಸಕರನ್ನು ಅರ್ಹಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಎರಡು ದಿನಗಳಲ್ಲಿಯೇ ಈ ಕ್ರಮ ತೆಗೆದುಕೊಂಡಿದ್ದು ಕರ್ನಾಟಕ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲವನ್ನೆಬ್ಬಿಸಿದೆ. ನವದೆಹಲಿಯಲ್ಲಿ ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಭಾರದ್ವಾಜ್ ಶನಿವಾರ ಪ್ರಧಾನಿಯನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದರು. ಮುಂದೆ ಏನು ಮಾಡಬೇಕೆಂಬುದನ್ನು ಬೆಂಗಳೂರಿಗೆ ಮರಳಿದ ನಂತರವೇ ಬಹಿರಂಗಪಡಿಸುವುದಾಗಿ ಹೇಳಿದ್ದರು. ಬೆಂಗಳೂರಿಗೆ ಮರಳುತ್ತಿದ್ದಂತೆಯೇ ವಿಧಾನಸಭೆಯನ್ನು ಅಮಾನತಿನಲ್ಲಿಡಲು ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಪ್ರತಿಕ್ರಿಯೆ : ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಪಾಲರು ಸಂವಿಧಾನಕ್ಕೆ ಬದ್ಧರಾಗಿಯೇ ಈ ಕ್ರಮವನ್ನು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವೇ ವಿಧಾನಸಭೆ ವಿಸರ್ಜಿಸಲು ಮನವಿ ಮಾಡಿತ್ತು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಲ್ಲದೆ, ಅನರ್ಹಗೊಂಡಿದ್ದ ಶಾಸಕರನ್ನು ಅರ್ಹಗೊಳಿಸಿ ಸುಪ್ರೀಂ ಕೋರ್ಟೇ ತೀರ್ಪು ನೀಡಿದೆ. ಕಳೆದ ಅಕ್ಟೋಬರಲ್ಲಿ ಇದೇ ಶಾಸಕರು ತಿರುಗಿಬಿದ್ದಾಗ ಶಾಸಕರನ್ನು ಅನರ್ಹಗೊಳಿಸದಿದ್ದರೆ ಮುಖ್ಯಮಂತ್ರಿ ಇಂದು ಮಾಜಿಯಾಗಿರುತ್ತಿದ್ದರು ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಸಹಮತ : ಸಂವಿಧಾನಾತ್ಮಕವಾಗಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆ ಹೇರಿದ್ದರೆ ಜೆಡಿಎಸ್ ಪಕ್ಷ ಇದನ್ನು ಸ್ವಾಗತಿಸುತ್ತದೆ. ಆದರೆ, ಯಾವ್ಯಾವ ವಿಷಯಗಳ ಆಧಾರದ ಮೇಲೆ ಸಂವಿಧಾನವನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಲಾಗಿದೆ ಎಂದು ಸ್ಪಷ್ಟವಾಗಿ ತಿಳಿದಿಲ್ಲ. ಸುಪ್ರೀಂ ಕೋರ್ಟಿನ ತೀರ್ಪು ಬಂದ ನಂತರ ಬಿಜೆಪಿ ಸರಕಾರ ಕುದುರೆ ವ್ಯಾಪಾರದಲ್ಲಿ ನಿರತವಾಗಿದೆ. ಇದು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದು ದಂಗೆಯೆದ್ದಿದ್ದ ಶಾಸಕರು ಇಂದು ಯಡಿಯೂರಪ್ಪ ಸ್ವಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications