ಮೈಸೂರು ಬಳ್ಳಾರಿ ಹೊಸೂರು ತುಮಕೂರು ರಸ್ತೆ ಬಂದ್

ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಮೈಸೂರು ರಸ್ತೆ ಮತ್ತು ಹೊಸೂರು ರಸ್ತೆಗಳು ಬೆಳಿಗ್ಗೆ 11ರಿಂದ ಅಪರಾಹ್ನ 12ರವರೆಗೆ ಸಾರ್ವಜನಿಕ ಸಂಪರ್ಕದಿಂದ ಕಡಿತಗೊಳ್ಳಲಿವೆ. ಯಾವ ಸ್ಥಳಗಳಲ್ಲಿ ಈ ಬಂದ್ ನಡೆಯಲಿದೆ ಎಂಬ ವಿವರಗಳು ಇನ್ನೂ ಲಭ್ಯವಾಗಿಲ್ಲ. ಒಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುತ್ತದೋ ಬಿಡುತ್ತದೋ ಬಂದ್ ಮಾಡಿ ಬಿಜೆಪಿಯನ್ನು ಶತಾಯ ಗತಾಯ ತೊಲಗಿಸಲು ಕಾಂಗ್ರೆಸ್ ಸನ್ನದ್ಧವಾಗಿ ನಿಂತಿದೆ. [ಯಡಿಯೂರಪ್ಪಗೆ ಅಗ್ನಿಪರೀಕ್ಷೆ]
ಒಂದು ಆಟೋ ಅಡ್ಡಾದಿಡ್ಡಿ ಚಲಿಸಿದರೆ ಅಥವಾ ಒಂದು ಸಮಾವೇಶ ನಡೆಸಿದರೆ ಸಂಭವಿಸುವ ಟ್ರಾಫಿಕ್ ಜಾಮ್ ನಿಂದ ಎಂತಹ ತೊಂದರೆ ಆಗುತ್ತದೆಂಬುದನ್ನು ನಮ್ಮ ಬೆಂಗಳೂರಿಗರು ಬಲ್ಲರು. ಇನ್ನು ಮಟಮಟ ಮಧ್ಯಾಹ್ನ ಒಂದು ಗಂಟೆ ಬಂದ್ ಆದರೆ ಆಗುವ ತೊಂದರೆಯನ್ನು ರಸ್ತೆಯಲ್ಲಿ ಅಡ್ಡಾಡುವವರೇ ಊಹಿಸಬೇಕು. ಸಾರ್ವಜನಿಕರಿಗೆ ಈ ಬಂದ್ ನಿಂದಾಗುವ ಪೇಚಾಟದ ಬಗ್ಗೆ ನಮ್ಮ ರಾಜಕೀಯ ನಾಯಕರಿಗೆ ಎಳ್ಳಷ್ಟೂ ಕಾಳಜಿ ಇದ್ದಂತಿಲ್ಲ. ಇವರಿಗೆ ತಿಳಿ ಹೇಳುವವರು ಯಾರು? ಈ ನಾಲ್ಕು ಹೆದ್ದಾರಿಗಳಲ್ಲಿ ಅಡ್ಡಾಡುವ ಜನರು ಬಂದ್ ನೋಟೀಸನ್ನು ಗಮನಿಸುವುದು ಒಳಿತು. ಇಲ್ಲದಿದ್ದರೆ, ತೊಂದರೆ ತಪ್ಪಿದ್ದಲ್ಲ. [ರಾಜ್ಯಪಾಲರು ಮಾಡಿದ್ದು ಸರೀನಾ?]
ಬಿಜೆಪಿಯಿಂದ ರಾಜ್ಯವ್ಯಾಪಿ ಪ್ರತಿಭಟನೆ : ಎಲ್ಲ ಚುನಾಯಿತ ಬಿಜೆಪಿ ಪ್ರತಿನಿಧಿಗಳನ್ನು ದೆಹಲಿಗೆ ಕಳಿಸಿದ ನಂತರ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಯನ್ನು ರಾಜ್ಯವ್ಯಾಪಿ ವಿಸ್ತರಿಸಲು ಬಿಜೆಪಿ ನಿರ್ಧರಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಷ್ಟ್ರಪತಿ ಆಳ್ವಿಕೆ ಹೇರುವ ಶಿಫಾರಸನ್ನು ನಿರಾಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಸಿದ್ಧತೆಗಳನ್ನು ನಡೆಸುತ್ತದೆ. [ರಾಜ್ಯಪಾಲರ ಬಗ್ಗೆ ಈಶ್ವರಪ್ಪ]
ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದ್ದರು. ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಯನ್ನು ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಪ್ರತಿಕೃತಿಗೆ ಹಚ್ಚಿದ ಬೆಂಕಿ ಕಾರ್ಯಕರ್ತನಿಗೂ ಹತ್ತಿಕೊಂಡು ಪ್ರತಿಭಟನಾಕಾರರೇ ದಿಕ್ಕೆಡುವಂತೆ ಮಾಡಿತು. [ಜ್ಯೋತಿಷಿ ಹೇಳೋದು ನಿಜವಾಗುವುದಾ?]
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications