ರಾಜ್ಯಪಾಲ ಭಾರದ್ವಾಜ್ ಮಾಡಿದ್ದು ಸರಿಯೋ ತಪ್ಪೋ?

ಹಂಸರಾಜ್ ಬಿಜೆಪಿ ಸರಕಾರ ಬೀಳಿಸಲು ಷಡ್ಯಂತ್ರ ಮಾಡುತ್ತಿದ್ದಾರೆ, ಅಭಿವೃದ್ಧಿಯನ್ನು ಸಹಿಸಿಕೊಳ್ಳುತ್ತಿರಲಿಲ್ಲ, ಕಾಂಗ್ರೆಸ್ ನಾಯಕ ಕುಮ್ಮಕ್ಕಿನಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕುಗಳು ಮಾಡುತ್ತಿರುವ ಆರೋಪಗಳು ಬರೀ ಕಾರಣಗಳಷ್ಟೆ. ಒಂದು ವೇಳೆ, ಆ ನಿಗೂಢ 'ಒಪ್ಪಂದ' ನಡೆಯದೇ ಹೋಗಿದ್ದರೆ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವ ಸಂಭವನೀಯತೆಯೇ ಇರುತ್ತಿರಲಿಲ್ಲ.
ಓದಿ : ಕರ್ನಾಟಕ ಪ್ರೀಮಿಯರ್ ಲೀಗ್ : ಯಡ್ಡಿ vs ರಾಜ್ಯಪಾಲ
ಸುಪ್ರೀಂ ಕೋರ್ಟ್ ತೀರ್ಪು ಬಂದ ಕೂಡಲೆ ಮತ್ತು 'ಒಪ್ಪಂದ' ನಡೆಯುವ ಮುನ್ನ ರಾಜ್ಯಪಾಲ ಭಾರದ್ವಾಜ್ ಅವರು ಯಾಕೆ ವಿಧಾನಸಭೆಯನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಲಿಲ್ಲ ಎಂಬ ಪ್ರಶ್ನೆಯೂ ಇಲ್ಲಿ ಉದ್ಭವಿಸುತ್ತದೆ. ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲು ಇಷ್ಟೊಂದು ಸಮಯ ತೆಗೆದುಕೊಂಡಿದ್ದೇಕೆ? ಪ್ರಧಾನಿ ಮತ್ತು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ನಂತರ ಈ ಕ್ರಮ ಕೈಗೊಂಡಿರುವುದು ಕೂಡ ಸಂಶಯದ ಬೊಟ್ಟನ್ನು ರಾಜ್ಯಪಾಲರತ್ತ ತೋರುವಂತಾಗಿದೆ.
ಕೇಂದ್ರಕ್ಕೆ ರಾಜ್ಯಪಾಲರು ಕಳಿಸಿರುವ ವಿಶೇಷ ವರದಿಯಲ್ಲಿನ ವಿಷಯವೂ ಇದೇ ಇರಬಹುದೆ? ಹಿಂದೆ ಭಿನ್ನಮತೀಯರು ಬಂಡಾಯವೆದ್ದಾಗಲೂ ಸ್ಪೀಕರ್ ಕ್ರಮವನ್ನು ಮತ್ತು ಭಿನ್ನರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಬಿಜೆಪಿ ನಡೆಸುತ್ತಿದ್ದ ಕ್ರಮವನ್ನು ಹಂಸರಾಜ್ ಭಾರದ್ವಾಜ್ ತೀವ್ರವಾಗಿ ಖಂಡಿಸಿದ್ದರು. ಮುಂದೆ, ವಿಶ್ವಾಸ ಪ್ರಾಪ್ತಿಯಾಗಿ, ಅನೇಕ ಭ್ರಷ್ಟಾಚಾರ ಪ್ರಕರಣಗಳು ಬೆಳಕಿಗೆ ಬಂದು, ಅನರ್ಹರು ಅರ್ಹರಾಗಿರುವ ಹೊತ್ತಿಗೆ ಭಾರಧ್ವಾಜ್ ಈ ಕ್ರಮ ತೆಗೆದುಕೊಂಡಿದ್ದಾರೆ.
ಕರ್ನಾಟಕದ ರಾಜಕೀಯ ಹಿಂದಿನ ಪಶ್ಚಿಮ ಬಂಗಾಳದ ಸರಕಾರದಷ್ಟು ಎಕ್ಕುಟ್ಟಿಹೋಗಿರದೆ ಇದ್ದರೂ, ಲಂಗುಲಗಾಮಿಲ್ಲದಂತೆ ರಾಜಕೀಯ ಚಟುವಟಿಕೆಗಳು ನಡೆಯುತ್ತಿರುವುದು ಸುಳ್ಳಲ್ಲ. ಕುರ್ಚಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಲ್ಕು ಬಾರಿ ಯಡಿಯೂರಪ್ಪ ಪಾರಾಗಿ ಬಂದಿದ್ದಾರೆ. ಅವರ ಸಂಪುಟದಲ್ಲಿದ್ದ ಅನೇಕ ಶಾಸಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅರ್ಹ ಶಾಸಕರನ್ನು ಸೆಳೆಯಲು ಏನೇನು ಆಮಿಷಗಳನ್ನು ಒಡ್ಡಿರಬಹುದೆಂದು ಊಹಿಸುವುದು ಕೂಡ ಅಂತಹ ಕಷ್ಟಕರ ವಿಷಯವೂ ಅಲ್ಲ. [ದಟ್ಸ್ ಕನ್ನಡ ವಾರ್ತೆ]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications