ರಾಜ್ಯಪಾಲರಿಗೆ ನಾಚಿಕೆ ಮಾನ ಮರ್ಯಾದೆಯಿಲ್ಲ : ಈಶ್ವರಪ್ಪ

ಬೆಂಗಳೂರಿನ ಮಹಾತ್ಮಾ ಗಾಂಧಿ ರಸ್ತೆಯಲ್ಲಿನ ಗಾಂಧೀಜಿ ಪ್ರತಿಮೆಯೆದಿರು ನಿಂತು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಹಂಸರಾಜ್ ಭಾರದ್ವಾಜ್ ಅವರನ್ನು ವಾಚಾಮಗೋಚರವಾಗಿ ತರಾಟೆಗೆ ತೆಗೆದುಕೊಳ್ಳುವಾಗ ಇಂಥ ಪದಪುಂಜಗಳನ್ನು ಧಾರಾಳವಾಗಿ ಬಳಸಿದರು. ಇಂಥ ಜನದ್ರೋಹಿ, ಸಂವಿಧಾನ ದ್ರೋಹಿ, ಪ್ರಜಾಪ್ರಭುತ್ವ ದ್ರೋಹಿ, ಕಾನೂನು ದ್ರೋಹಿ, ಸುಪ್ರೀಂ ಕೋರ್ಟ್ ದ್ರೋಹಿ ರಾಜ್ಯಪಾಲರನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. [ಕೆಪಿಎಲ್ : ಯಡಿಯೂರಪ್ಪ vs ರಾಜ್ಯಪಾಲ]
ಪಕ್ಷಭೇದ ಮರೆತ ಜನ : ರಾಜಭವನದ ಎದಿರು ಪ್ರತಿಭಟನೆ ರದ್ದು ಮಾಡಿದ ಕಾರಣ, ಮಹಾತ್ಮಾ ಗಾಂಧಿ ಪ್ರತಿಮೆ ಎದಿರು ಶಿಫ್ಟಾದ ಕಾರಣ ಕ್ಯಾಪಿಟಲ್ ಹೊಟೇಲಿನಿಂದ ಪ್ರತಿಮೆವರೆಗೆ ಈಶ್ವರಪ್ಪ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿತು. ಈ ಕಾರಣ ಗಾಂಧಿ ಪ್ರತಿಮೆ ಇರುವ ವೃತ್ತ ಸೇರುವ ಎಲ್ಲ ರಸ್ತೆಗಳಲ್ಲಿ ಭಾರೀ ವಾಹನದಟ್ಟಣೆ ಸಂಭವಿಸಿ, ತೊಂದರೆ ಅನುಭವಿಸಿದ ಜನರು ಪಕ್ಷಭೇದ ಮರೆತು ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಮಾಡಿದ ರಾಜ್ಯಪಾಲರನ್ನು, ಪ್ರತಿಭಟಿಸುತ್ತಿರುವ ಬಿಜೆಪಿಯನ್ನು, ಇದಕ್ಕೆ ಕಾರಣರಾಗಿರುವ ವಿರೋಧಪಕ್ಷಗಳನ್ನು ಹೀನಾಯವಾಗಿ ಬೈದುಕೊಂಡರು.
ನಾಲ್ಕು ನಿರ್ಣಯ : ಇದಕ್ಕೂ ಮೊದಲು ಯಡಿಯೂರಪ್ಪ ನೇತೃತ್ವದಲ್ಲಿ ಕ್ಯಾಪಿಟಲ್ ಹೊಟೇಲಿನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಲ್ಕು ನಿರ್ಣಯಗಳನ್ನು ಕೈಗೊಂಡಿತು. ರಾಜ್ಯಪಾಲ ಹಂಸರಾಜ್ ವಿರುದ್ಧ ಖಂಡನಾ ನಿರ್ಣಯ, ಎಲ್ಲ 120 ಶಾಸಕರು ಯಡಿಯೂರಪ್ಪನವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ ಮತ್ತು ಬಿಜೆಪಿಗೆ ಬೆಂಬಲ ನೀಡಿದ 11 ಬಿಜೆಪಿ ಶಾಸಕರನ್ನು ಅಭಿನಂದಿಸುವ ಮೂರು ನಿರ್ಣಯಗಳನ್ನು ಕೈಗೊಂಡಿತು. ಇಂದಿನಿಂದ ಹತ್ತು ದಿನಗಳ ಆರಂಭವಾಗಬೇಕಿದ್ದ ವಿಶೇಷ ಜಂಟಿ ಅಧಿವೇಶನವನ್ನು ಮುಂದೂಡಿ ಜೂನ್ 2ರಿಂದ ನಡೆಸುವ ನಿರ್ಣಯವನ್ನೂ ತೆಗೆದುಕೊಳ್ಳಲಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications