ರಾಜ್ಯಪಾಲರಿಗೆ ನಾಚಿಕೆ ಮಾನ ಮರ್ಯಾದೆಯಿಲ್ಲ : ಈಶ್ವರಪ್ಪ

ಬೆಂಗಳೂರಿನ ಮಹಾತ್ಮಾ ಗಾಂಧಿ ರಸ್ತೆಯಲ್ಲಿನ ಗಾಂಧೀಜಿ ಪ್ರತಿಮೆಯೆದಿರು ನಿಂತು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ಹಂಸರಾಜ್ ಭಾರದ್ವಾಜ್ ಅವರನ್ನು ವಾಚಾಮಗೋಚರವಾಗಿ ತರಾಟೆಗೆ ತೆಗೆದುಕೊಳ್ಳುವಾಗ ಇಂಥ ಪದಪುಂಜಗಳನ್ನು ಧಾರಾಳವಾಗಿ ಬಳಸಿದರು. ಇಂಥ ಜನದ್ರೋಹಿ, ಸಂವಿಧಾನ ದ್ರೋಹಿ, ಪ್ರಜಾಪ್ರಭುತ್ವ ದ್ರೋಹಿ, ಕಾನೂನು ದ್ರೋಹಿ, ಸುಪ್ರೀಂ ಕೋರ್ಟ್ ದ್ರೋಹಿ ರಾಜ್ಯಪಾಲರನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. [ಕೆಪಿಎಲ್ : ಯಡಿಯೂರಪ್ಪ vs ರಾಜ್ಯಪಾಲ]
ಪಕ್ಷಭೇದ ಮರೆತ ಜನ : ರಾಜಭವನದ ಎದಿರು ಪ್ರತಿಭಟನೆ ರದ್ದು ಮಾಡಿದ ಕಾರಣ, ಮಹಾತ್ಮಾ ಗಾಂಧಿ ಪ್ರತಿಮೆ ಎದಿರು ಶಿಫ್ಟಾದ ಕಾರಣ ಕ್ಯಾಪಿಟಲ್ ಹೊಟೇಲಿನಿಂದ ಪ್ರತಿಮೆವರೆಗೆ ಈಶ್ವರಪ್ಪ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿತು. ಈ ಕಾರಣ ಗಾಂಧಿ ಪ್ರತಿಮೆ ಇರುವ ವೃತ್ತ ಸೇರುವ ಎಲ್ಲ ರಸ್ತೆಗಳಲ್ಲಿ ಭಾರೀ ವಾಹನದಟ್ಟಣೆ ಸಂಭವಿಸಿ, ತೊಂದರೆ ಅನುಭವಿಸಿದ ಜನರು ಪಕ್ಷಭೇದ ಮರೆತು ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಮಾಡಿದ ರಾಜ್ಯಪಾಲರನ್ನು, ಪ್ರತಿಭಟಿಸುತ್ತಿರುವ ಬಿಜೆಪಿಯನ್ನು, ಇದಕ್ಕೆ ಕಾರಣರಾಗಿರುವ ವಿರೋಧಪಕ್ಷಗಳನ್ನು ಹೀನಾಯವಾಗಿ ಬೈದುಕೊಂಡರು.
ನಾಲ್ಕು ನಿರ್ಣಯ : ಇದಕ್ಕೂ ಮೊದಲು ಯಡಿಯೂರಪ್ಪ ನೇತೃತ್ವದಲ್ಲಿ ಕ್ಯಾಪಿಟಲ್ ಹೊಟೇಲಿನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾಲ್ಕು ನಿರ್ಣಯಗಳನ್ನು ಕೈಗೊಂಡಿತು. ರಾಜ್ಯಪಾಲ ಹಂಸರಾಜ್ ವಿರುದ್ಧ ಖಂಡನಾ ನಿರ್ಣಯ, ಎಲ್ಲ 120 ಶಾಸಕರು ಯಡಿಯೂರಪ್ಪನವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ ಮತ್ತು ಬಿಜೆಪಿಗೆ ಬೆಂಬಲ ನೀಡಿದ 11 ಬಿಜೆಪಿ ಶಾಸಕರನ್ನು ಅಭಿನಂದಿಸುವ ಮೂರು ನಿರ್ಣಯಗಳನ್ನು ಕೈಗೊಂಡಿತು. ಇಂದಿನಿಂದ ಹತ್ತು ದಿನಗಳ ಆರಂಭವಾಗಬೇಕಿದ್ದ ವಿಶೇಷ ಜಂಟಿ ಅಧಿವೇಶನವನ್ನು ಮುಂದೂಡಿ ಜೂನ್ 2ರಿಂದ ನಡೆಸುವ ನಿರ್ಣಯವನ್ನೂ ತೆಗೆದುಕೊಳ್ಳಲಾಯಿತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications