ಯಡಿಯೂರಪ್ಪ, ಪ್ರಧಾನಿ, ಜ್ಯೋತಿಷಿಗೆ ಅಗ್ನಿಪರೀಕ್ಷೆ

ದೆಹಲಿಯ ಪ್ರಧಾನಿ ಕಚೇರಿಯಿಂದ ಬರುತ್ತಿರುವ ವರ್ತಮಾನಗಳ ಪ್ರಕಾರ, ಕರ್ನಾಟಕದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು, ರಾಷ್ಟ್ರಪತಿ ಆಳ್ವಿಕೆ ಹೇರಬೇಕು, ಯಡಿಯೂರಪ್ಪ ಸರಕಾರ ವಜಾಗೊಳಿಸಬೇಕು ಎಂದು ಕಳಿಸಿರುವ ವರದಿಯನ್ನು ಕೇಂದ್ರ ತರಾತುರಿಯಲ್ಲಿ ಒಪ್ಪಲಿಕ್ಕಿಲ್ಲ ಎಂಬ ಸುದ್ದಿ ವಿಶ್ವಸನೀಯ ಮೂಲಗಳಿಂದ ತಿಳಿದುಬರುತ್ತಿದೆ. ಅದೃಷ್ಟ ಪರೀಕ್ಷೆಗೆ ನಿಂತಿರುವ ಯಡಿಯೂರಪ್ಪ ಐದನೇ ಬಾರಿ ಅಪಾಯದಿಂದ ಪಾರಾಗುವ ಲಕ್ಷಣಗಳು ಕಾಣುತ್ತಿವೆ. [ಕೆಪಿಎಲ್ : ಯಡಿಯೂರಪ್ಪ vs ಭಾರದ್ವಾಜ್]
ದೆಹಲಿಗೆ ಪಯಣ : ಬಹುಮತವಿದ್ದರೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಂಸರಾಜ್ ಅವರನ್ನು ಕೂಡಲೆ ವಾಪಸ್ ಕರೆಸಿಕೊಳ್ಳಿ ಎಂದು ಇಡೀ ಬಿಜೆಪಿ ನಾಯಕಗಣದಿಂದ ಕೇಂದ್ರದ ಮೇಲೆ ಒತ್ತಡ ಬರುತ್ತಿದೆ. ಯಡಿಯೂರಪ್ಪ ಮತ್ತು 120 ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಮೂರು ಪ್ರತ್ಯೇಕ ತಂಡಗಳಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು, ದೆಹಲಿಗೆ ಪಯಣ ಬೆಳೆಸುತ್ತಿದ್ದಾರೆ. ಮಂಗಳವಾರ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಎದುರಿಗೆ ಪರೇಡ್ ಮಾಡಲು ನಿರ್ಧರಿಸಿರುವುದು ಕೇಂದ್ರಕ್ಕೆ ತಲೆನೋವಾಗಿ ಪರಿಣಮಿಸಿದೆ.
ಪ್ರಧಾನಿ ಮೇಲೆ ಭಾರ : ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪ್ರಧಾನಿ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೇಳಿದ್ದಾರೆ. ಪ್ರಧಾನಿ ಮನಮೋಹನ ಸಿಂಗ್ ಅವರ ಮೇಲೆ ಅಪಾರ ವಿಶ್ವಾಸ ಮತ್ತು ಗೌರವವಿದೆ. ಅವರು ಬಿಜೆಪಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಂದೇಹವಿಲ್ಲ ಎಂದು ಯಡಿಯೂರಪ್ಪ ಚೆಂಡನ್ನು ಪ್ರಧಾನಿ ಅಂಗಳಕ್ಕೆ ತಳ್ಳಿದ್ದಾರೆ. ಸಂವಿಧಾನಕ್ಕೆ ಕಂಟಕವಾಗಿರುವ ರಾಜ್ಯಪಾಲರನ್ನು ವಾಪಸ್ ಕರೆಯಿಸಿಕೊಳ್ಳಲು ಅವರ ಮೇಲೆ ಒತ್ತಡ ಹೇರುವುದಾಗಿ ಹೇಳಿದ್ದಾರೆ. [ರಾಜ್ಯಪಾಲರು ಮಾಡಿದ್ದು ಸರಿಯೆ?]
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications