ಭಾರದ್ವಾಜ್ ಗೆ ಬಳ್ಳಾರಿಯಲ್ಲಿ ಬಿಜೆಪಿ ಬಣದ ಧಿಕ್ಕಾರ

ಈ ಸಂದರ್ಭದಲ್ಲಿ ಮಾತನಾಡಿದ ಗುತ್ತಿಗನೂರು ವಿರೂಪಾಕ್ಷಗೌಡ, ಜನಾದೇಶದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವನ್ನು ಕೆಳಗಿಳಿಸಲು ಕಾಂಗ್ರೆಸ್ - ಜೆಡಿಎಸ್ ನಡೆಸುತ್ತಿರುವ ತಂತ್ರಗಳಿಗೆ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಅವರು ಕುಣಿಕೆ ಆಗುತ್ತಿದ್ದಾರೆ. ಕಾರಣ ಪದೇ ಪದೇ ಸರ್ಕಾರವನ್ನು ಸಂಕಷ್ಟಕ್ಕೆ ಈಡು ಮಾಡುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಿದೆ. ಎಲ್ಲಾ ಜಾತಿ, ಜನಾಂಗ, ವರ್ಗದ ಜನರು ಸುಖ ನೆಮ್ಮದಿಯ ಬದುಕನ್ನು ನಡೆಸುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ಆಡಳಿತದ ಯಶಸ್ಸನ್ನು ಸಹಿಸದೇ ಇಲ್ಲಸಲ್ಲದ ನೆಪಗಳನ್ನು ಹುಡುಕಿಕೊಂಡು ಕಾಂಗ್ರೆಸ್ - ಜೆಡಿಎಸ್ ಅಧಿಕ್ಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹಾಳುಮಾಡುತ್ತಿವೆ ಎಂದು ಆರೋಪಿಸಿದರು. [ಕಾಂಗ್ರೆಸ್ ನಿಂದ ರಸ್ತೆ ಬಂದ್]
ಭಾರದ್ವಾಜ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು. ಸರ್ಕಾರವನ್ನು ಉರುಳಿಸಿ ವಾಮಮಾರ್ಗದಲ್ಲಿ ಅಧಿಕಾರ ಸ್ಥಾಪಿಸುವ ತಂತ್ರಗಾರಿಕೆ ನಡೆಸುತ್ತಿರುವ ಕಾಂಗ್ರೆಸ್ - ಜೆಡಿಎಸ್ ಪಕ್ಷದ ತೀವ್ರ ವಿರೋಧವನ್ನು ಎದುರಿಸಬೇಕು ಎಂದು ಅವರು ಎಚ್ಚರಿಸಿದರು. ರಾಜ್ಯಪಾಲರು ಕೇವಲ ಒಂದು ವರ್ಷದಲ್ಲಿ 2 ಬಾರಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಗುರಿ ಮಾಡಿದ್ದಾರೆ. ಪದೇ ಪದೇ ವಿಶ್ವಾಸಮತ ಕೋರುವ ಹೊಸದಾದ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಶಾಸಕತ್ವ ಉಳಿಸಿಕೊಂಡ 16 ಶಾಸಕರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದರು.
ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಾರ್ವತಿ ಎಸ್. ಇಂದೂಶೇಖರ್, ಉಪ ಮೇಯರ್ ಶಶಿಕಲಾ ಕೃಷ್ಣಮೋಹನ್, ಜಿಲ್ಲಾ - ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಪೊರೇಟರ್ಗಳು, ಆರ್ಬಿಕೆಎಂಯು ಅಧ್ಯಕ್ಷ ತಿಮ್ಮಾರೆಡ್ಡಿ, ಬುಡಾ ಅಧ್ಯಕ್ಷ ಎಸ್. ಗುರುಲಿಂಗನಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು. [ಯಡ್ಡಿ vs ಭಾರದ್ವಾಜ್ : ಸುದ್ದಿ ಸಂಗ್ರಹ]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications