ಅಧಿವೇಶನಕ್ಕೆ ಅನುಮತಿ ನೀಡಿ, ಎರಡು ದಿನ ಕಾಯಿರಿ

ಲೋಕಸೇವಾ ಆಯೋಗದ ಕಾರ್ಯಕ್ರಮವೊಂದರಲ್ಲಿ ಹಸ್ತಲಾಘವ ಮಾಡಿದ್ದ ಭಾರದ್ವಾಜ್ ಅವರನ್ನು ರಾಜಭವನದಲ್ಲಿ ಇಂದು ಸುರಿಯುತ್ತಿದ್ದ ಮಳೆಯಲ್ಲಿಯೇ 4 ಗಂಟೆಗೆ ಭೇಟಿ ಮಾಡಿದ ಯಡಿಯೂರಪ್ಪ ಅಧಿವೇಶನ ನಡೆಸಲು ಅನುಮತಿ ಕೋರಿದರು. ನಂತರ ಸಂಜೆ 5.30ಕ್ಕೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮಿಬ್ಬರ ನಡುವೆ ನಡೆದ ಮಾತುಕತೆಯ ವಿವರ ನೀಡಿದರು. ರಾಜಭವನಕ್ಕೆ ಶೋಭಾ, ಸುರೇಶ್ ಕುಮಾರ್, ಕಾರಜೋಳ, ಅಶೋಕ್, ಬೊಮ್ಮಾಯಿ ಮುಂತಾದವರು ಮುಖ್ಯಮಂತ್ರಿ ಜೊತೆ ಹೋಗಿದ್ದರು.
ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಮಾಡಿ ಕಳಿಸಿದ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದ ನಂತರ ವಿಶೇಷ ಅಧಿವೇಶನ ನೀಡುವ ಕುರಿತು ಚಿಂತಿಸುವುದಾಗಿ ಭಾರದ್ವಾಜ್ ಹೇಳಿರುವುದಾಗಿ ಯಡಿಯೂರಪ್ಪ ತಿಳಿಸಿದರು. ಇದೇ ಮೇ 16ರಿಂದಲೇ ಜಂಟಿ ಅಧಿವೇಶನ ಆರಂಭವಾಗಬೇಕಿತ್ತು. ಇದಕ್ಕೆ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಈ ಅಧಿವೇಶನಕ್ಕೂ ರಾಜ್ಯಪಾಲರಿಂದ ಪೂರಕವಾದ ಪ್ರತಿಕ್ರಿಯೆ ಬಂದಿಲ್ಲ. ಇನ್ನೆರಡು ದಿನಗಳಲ್ಲಿ ಕೇಂದ್ರದಿಂದ ಪತ್ರ ಬರಲಿದ್ದು, ನಂತರ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ಯುದ್ಧ ವಿರಾಮ? : ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ರಾಜ್ಯಪಾಲರು ವಿಧಾನಸಭೆಯನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಿದ್ದು ಗಾಳಿಯಲ್ಲಿ ಗುದ್ದಾಡಿದಂತೆ ಆಗಿದೆ. ಕೇಂದ್ರದ ತಟಸ್ಥ ನೀತಿ ಬಿಜೆಪಿಯವರೂ ಗಲಿಬಿಲಿಯಾಗುವಂತೆ ಮಾಡಿದೆ. ಒಳಗೊಳಗೇ ಜ್ವಾಲಾಮುಖಿ ಕುದಿಯುತ್ತಿದ್ದರೂ ಹೊರಗಡೆ 'ರಾಜಕೀಯದಲ್ಲಿ ಇದೆಲ್ಲ ಸಹಜ' ಎಂಬಂತೆ ಯಡಿಯೂರಪ್ಪ ಮತ್ತು ಭಾರದ್ವಾಜ್ ನಟಿಸುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಏನೂ ತಿಳಿಯದೆ ಕಕ್ಕಾಬಿಕ್ಕಿಯಾಗಿದೆ.
ಯಡಿಯೂರಪ್ಪನಂಥ ಸರಕಾರ ದೇಶದಲ್ಲಿಯೇ ಅತಿ ಭ್ರಷ್ಟ ಸರಕಾರ ಎಂದು ಒಂದು ಬಾರಿ ತೆಗಳುವ, ಇನ್ನೊಂದು ಬಾರಿ ಯಡಿಯೂರಪ್ಪ ಭಾರೀ ಕಷ್ಟಜೀವಿ ಎಂದು ಹೊಗಳುವ ರಾಜ್ಯಪಾಲರ ಭಾರದ್ವಾಜ್ ಅವರ ನಡೆನುಡಿಗಳು ರಾಜಕೀಯ ಪಂಡಿತರನ್ನೂ ಕನ್ಫ್ಯೂಸ್ ಮಾಡಿವೆ. ಈ ಕರ್ನಾಟಕ ರಾಜಕೀಯ ನಾಟಕವನ್ನು ನೋಡುತ್ತಿರುವ ಜನತೆ ಏನಾದರೂ ಮಾಡಿಕೊಳ್ಳಲಿ, ಇನ್ನಾದರೂ ಅಭಿವೃದ್ಧಿಯತ್ತ ಗಮನ ನೀಡಲಿ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಿ, ಭ್ರಷ್ಟಾಚಾರವನ್ನು ಮಟ್ಟಹಾಕಲಿ ಎಂಬ ನಿಲುವು ತಳೆದಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications