ಅಧಿವೇಶನಕ್ಕೆ ಅನುಮತಿ ನೀಡಿ, ಎರಡು ದಿನ ಕಾಯಿರಿ

ಲೋಕಸೇವಾ ಆಯೋಗದ ಕಾರ್ಯಕ್ರಮವೊಂದರಲ್ಲಿ ಹಸ್ತಲಾಘವ ಮಾಡಿದ್ದ ಭಾರದ್ವಾಜ್ ಅವರನ್ನು ರಾಜಭವನದಲ್ಲಿ ಇಂದು ಸುರಿಯುತ್ತಿದ್ದ ಮಳೆಯಲ್ಲಿಯೇ 4 ಗಂಟೆಗೆ ಭೇಟಿ ಮಾಡಿದ ಯಡಿಯೂರಪ್ಪ ಅಧಿವೇಶನ ನಡೆಸಲು ಅನುಮತಿ ಕೋರಿದರು. ನಂತರ ಸಂಜೆ 5.30ಕ್ಕೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಮ್ಮಿಬ್ಬರ ನಡುವೆ ನಡೆದ ಮಾತುಕತೆಯ ವಿವರ ನೀಡಿದರು. ರಾಜಭವನಕ್ಕೆ ಶೋಭಾ, ಸುರೇಶ್ ಕುಮಾರ್, ಕಾರಜೋಳ, ಅಶೋಕ್, ಬೊಮ್ಮಾಯಿ ಮುಂತಾದವರು ಮುಖ್ಯಮಂತ್ರಿ ಜೊತೆ ಹೋಗಿದ್ದರು.
ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಮಾಡಿ ಕಳಿಸಿದ ಪತ್ರಕ್ಕೆ ಕೇಂದ್ರದಿಂದ ಉತ್ತರ ಬಂದ ನಂತರ ವಿಶೇಷ ಅಧಿವೇಶನ ನೀಡುವ ಕುರಿತು ಚಿಂತಿಸುವುದಾಗಿ ಭಾರದ್ವಾಜ್ ಹೇಳಿರುವುದಾಗಿ ಯಡಿಯೂರಪ್ಪ ತಿಳಿಸಿದರು. ಇದೇ ಮೇ 16ರಿಂದಲೇ ಜಂಟಿ ಅಧಿವೇಶನ ಆರಂಭವಾಗಬೇಕಿತ್ತು. ಇದಕ್ಕೆ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಈ ಅಧಿವೇಶನಕ್ಕೂ ರಾಜ್ಯಪಾಲರಿಂದ ಪೂರಕವಾದ ಪ್ರತಿಕ್ರಿಯೆ ಬಂದಿಲ್ಲ. ಇನ್ನೆರಡು ದಿನಗಳಲ್ಲಿ ಕೇಂದ್ರದಿಂದ ಪತ್ರ ಬರಲಿದ್ದು, ನಂತರ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.
ಯುದ್ಧ ವಿರಾಮ? : ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ರಾಜ್ಯಪಾಲರು ವಿಧಾನಸಭೆಯನ್ನು ಅಮಾನತಿನಲ್ಲಿಡಲು ಶಿಫಾರಸು ಮಾಡಿದ್ದು ಗಾಳಿಯಲ್ಲಿ ಗುದ್ದಾಡಿದಂತೆ ಆಗಿದೆ. ಕೇಂದ್ರದ ತಟಸ್ಥ ನೀತಿ ಬಿಜೆಪಿಯವರೂ ಗಲಿಬಿಲಿಯಾಗುವಂತೆ ಮಾಡಿದೆ. ಒಳಗೊಳಗೇ ಜ್ವಾಲಾಮುಖಿ ಕುದಿಯುತ್ತಿದ್ದರೂ ಹೊರಗಡೆ 'ರಾಜಕೀಯದಲ್ಲಿ ಇದೆಲ್ಲ ಸಹಜ' ಎಂಬಂತೆ ಯಡಿಯೂರಪ್ಪ ಮತ್ತು ಭಾರದ್ವಾಜ್ ನಟಿಸುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಏನೂ ತಿಳಿಯದೆ ಕಕ್ಕಾಬಿಕ್ಕಿಯಾಗಿದೆ.
ಯಡಿಯೂರಪ್ಪನಂಥ ಸರಕಾರ ದೇಶದಲ್ಲಿಯೇ ಅತಿ ಭ್ರಷ್ಟ ಸರಕಾರ ಎಂದು ಒಂದು ಬಾರಿ ತೆಗಳುವ, ಇನ್ನೊಂದು ಬಾರಿ ಯಡಿಯೂರಪ್ಪ ಭಾರೀ ಕಷ್ಟಜೀವಿ ಎಂದು ಹೊಗಳುವ ರಾಜ್ಯಪಾಲರ ಭಾರದ್ವಾಜ್ ಅವರ ನಡೆನುಡಿಗಳು ರಾಜಕೀಯ ಪಂಡಿತರನ್ನೂ ಕನ್ಫ್ಯೂಸ್ ಮಾಡಿವೆ. ಈ ಕರ್ನಾಟಕ ರಾಜಕೀಯ ನಾಟಕವನ್ನು ನೋಡುತ್ತಿರುವ ಜನತೆ ಏನಾದರೂ ಮಾಡಿಕೊಳ್ಳಲಿ, ಇನ್ನಾದರೂ ಅಭಿವೃದ್ಧಿಯತ್ತ ಗಮನ ನೀಡಲಿ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಿ, ಭ್ರಷ್ಟಾಚಾರವನ್ನು ಮಟ್ಟಹಾಕಲಿ ಎಂಬ ನಿಲುವು ತಳೆದಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications