24x7 ರಾಜಕಾರಣಿ ಕನ್ನಡಿಗ ಎಚ್ ಡಿ ದೇವೇಗೌಡ 79

ಪ್ರತಿವರ್ಷದಂತೆ ಈ ಬಾರಿಯೂ ಕುಟುಂಬದವರ ಜೊತೆ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವ ನಿರ್ಧಾರವನ್ನು ದೇವೇಗೌಡರು ತಳೆದಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಕೆಲವು ಹಳೆಯ ಸ್ನೇಹಿತರೊಂದಿಗೆ ಶುಭಾಶಯ ವಿನಿಮಯ ಬಿಟ್ಟರೆ ಅದ್ಧೂರಿತನಕ್ಕೆ ಅವಕಾಶವಿಲ್ಲದ ಹುಟ್ಟುಹಬ್ಬ ಅವರದ್ದಾಗಿರುತ್ತದೆ.
ಬುಧವಾರ ಬೆಳಗ್ಗೆ ಮೇಲುಕೋಟೆಗೆ ತೆರಳಿ ಯೋಗ ನರಸಿಂಹಸ್ವಾಮಿ ಮತ್ತು ಚೆಲುವರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದ ಅಹೋಬಿಲ ಮಠದಲ್ಲಿ ಮಲೋಲ ಲಕ್ಷ್ಮೀ ನರಸಿಂಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ನಾರಾಯಣ ಯತೀಂದ್ರ ಶ್ರೀಗಳ ಆಶೀರ್ವಾದ ಪಡೆದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಆನಂತರ ಬೆಂಗಳೂರಿನಿಂದ ನವದೆಹಲಿಗೆ ತೆರಳಿ ಅನುದಿನದ ರಾಜಕಾರಣದಲ್ಲಿ ಮತ್ತೆ ಅವರು ತೊಡಗಿಕೊಳ್ಳಲಿದ್ದಾರೆ.
ದೇವೇಗೌಡರು ಮೇ 18 , 1933 ರಲ್ಲಿ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಮೂಲತಃ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ ಪಡೆದಿರುವ ದೇವೇಗೌಡ, 1953 ರಿಂದ 1962 ರ ವರೆಗೆ ಕಾಂಗ್ರೆಸ್ ಪಕ್ಷದಲ್ಲಿದ್ದು ಸ್ವತಂತ್ರವಾಗಿ ವಿಧಾನಸಭಾ ಚುನಾವಣೆಗೆ ನಿಂತು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಮುಂದಿನ ಮೂರು ಚುನಾವಣೆಯಲ್ಲಿ ಸತತವಾಗಿ ಹೊಳೆನರಸೀಪುರದಿಂದ ಗೆದ್ದು ಎರಡು ಅವಧಿಗೆ ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.
1991 ರಲ್ಲಿ ಮೊದಲ ಬಾರಿಗೆ ಹಾಸನ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾದರು. 1994ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರದಲ್ಲಿ 1996 ರಲ್ಲಿ ಯಾವುದೇ ಪಕ್ಷಕ್ಕೆ ಬಹುಮತವಿರದೆ ತೃತೀಯ ರಂಗದ ನಾಯಕರಾಗಿ ಆಯ್ಕೆಯಾಗಿ ಎಲ್ಲರೂ ಹುಬ್ಬೇರಿಸುವಂತೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ರಾಜಕೀಯ ಮುತ್ಸದ್ದಿ, 24x7 ರಾಜಕಾರಿಣಿ ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಲಾಂಗ್ ಲಿವ್ ದೇವೇಗೌಡ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications