ಯಡ್ಡಿ ಪದಚ್ಯುತಿಗೆ ಬಿಜೆಪಿಯಿಂದಲೇ ಪಿತೂರಿ : ಡಿಕೆಶಿ

ಡಿಕೆ ಶಿವಕುಮಾರ್ ಹೇಳಿದ್ದೇನೆಂದರೆ, "ರಾಜ್ಯದ ನಾಯಕರು ಮಾತ್ರವಲ್ಲ ರಾಷ್ಟ್ರೀಯ ನಾಯಕರು ಕೂಡ ಮೇಲಿಂದ ಮೇಲೆ ದೂರವಾಣಿ ಮಾಡುತ್ತಿದ್ದು, ಯಡಿಯೂರಪ್ಪ ನಾಯಕತ್ವದ ವಿರುದ್ಧ ಹೋರಾಟ ಮುಂದುವರಿಸುವಂತೆ ಒತ್ತಾಯಿಸುತ್ತಿದ್ದಾರೆ. ಶೇ.60ರಷ್ಟು ಶಾಸಕರು ನಾಯಕತ್ವದ ಬದಲಾವಣೆ ಬಯಸುತ್ತಿದ್ದಾರೆ. ಆದರೆ ಬಹಿರಂಗವಾಗಿ ಹೇಳಲು ಹಿಂಜರಿಯುತ್ತಿದ್ದಾರೆ."
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯ ಧನಂಜಯ ಕುಮಾರ್ ಅವರು, "ನಾಯಕತ್ವ ಬದಲಾವಣೆಯ ಬೇಡಿಕೆಯ ಬಗ್ಗೆ ಡಿಕೆಶಿ ಪುರಾವೆ ನೀಡಲಿ. ಚುನಾವಣೆಯಲ್ಲಿನ ಸೋಲಿನ ಹತಾಶೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಅವರಿಂದ ಈ ರೀತಿಯ ಮಾತು ಆಡಿಸುತ್ತಿದ್ದಾರೆ. ಅವರ ಪಕ್ಷದಲ್ಲಿಯೇ ಸಾಕಷ್ಟು ಒಡಕುಗಳಿವೆ. ಅದನ್ನು ಮರೆಮಾಚಲು ಹೀಗೆಲ್ಲ ಹೇಳುತ್ತಿದ್ದಾರೆ" ಎಂದಿದ್ದಾರೆ. [ಕೆಪಿಎಲ್ : ಯಡಿಯೂರಪ್ಪ vs ಭಾರದ್ವಾಜ್]
ಇದಕ್ಕೆ ಪ್ರತಿಯಾಗಿ ಡಿಕೆಶಿ, ಪುರಾವೆ ಏನು ನೀಡುವುದು? ಬೇಕಿದ್ದರೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಿ, ಕೋರ್ಟಿನಲ್ಲಿಯೇ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ. ಆದರೆ, ಈ ಸವಾಲನ್ನು ಸ್ವೀಕರಿಸಲು ಹಿಂದೇಟು ಹಾಕುತ್ತಿರುವ ಧನಂಜಯಕುಮಾರ್, ಡಿಕೆಶಿ ಮಾತನ್ನು ನಂಬುವುದು ಮೂರ್ಖತನದ ಪರಮಾವಧಿ ಎಂದಷ್ಟೇ ಹೇಳುತ್ತಿದ್ದಾರೆ. ಡಿಕೆಶಿ ಹೇಳಿದಂತೆ ಬಿಜೆಪಿ ನಾಯಕರು ಒತ್ತಡವನ್ನು ನನ್ನ ಮೇಲಂತೂ ಹೇರಿಲ್ಲ ಎಂದು ಡಿಕೆಶಿ ಮೇಲೆಯೇ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ನರೇಂದ್ರ ಮೋದಿ ಒತ್ತಾಯ : ಜನರಿಂದ ಬಹುಮತ ಪಡೆದು ಆಯ್ಕೆಯಾಗಿರುವ ಬಿಜೆಪಿ ಸರಕಾರವನ್ನು ಕೆಡವುವ ಉದ್ದೇಶದಿಂದ ಕರ್ನಾಟಕದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಅಸಂವಿಧಾನಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಡಳಿತವನ್ನು ದಿಕ್ಕುತಪ್ಪಿಸುತ್ತಿರುವ ಭಾರದ್ವಾಜ್ ಅವರನ್ನು ಕೂಡಲೆ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಮುಗಿದ ಗಡುವು, ಮುಂದೇನು? : ಇಂದು ಸಂಜೆಯ ಒಳಗೆ ಜಂಟಿ ಅಧಿವೇಶನ ನಡೆಸಲು ಅನುಮತಿ ನೀಡದಿದ್ದರೆ ರಾಜ್ಯವ್ಯಾಪಿ ಹೋರಾಟ ಚುರುಕುಗೊಳಿಸುವುದಾಗಿ ಯಡಿಯೂರಪ್ಪ ರಾಜ್ಯಪಾಲರಿಗೆ ಎಚ್ಚರಿಸಿದ್ದರು. ಸಂಜೆಯ ಗಡುವು ಮುಗಿಯುತ್ತ ಬಂದಿದ್ದರೂ ರಾಜಭವನದಿಂದ ಯಾವುದೇ ಸೂಚನೆ ಬಂದಿಲ್ಲ. ಇನ್ನೆರಡು ದಿನ ಕಾಯಿರಿ ಎಂದು ರಾಜ್ಯಪಾಲರು ಹೇಳಿದ್ದರೂ ಕಾಯಲು ಬಿಜೆಪಿ ತಯಾರಿಲ್ಲ. ಹಾಗಿದ್ದರೆ ಬಿಜೆಪಿಯ ಮುಂದಿನ ನಡೆಯೇನು?
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications