ಹಂಸ್ ಮೇಲೆ ರಾಯಚೂರಿನಲ್ಲಿ ಕೆಂಡ ಕಾರಿದ ಬಿಎಸ್ ವೈ

ಸಂವಿಧಾನದ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಹಾರ ಹಾಕುವ ಮೂಲಕ ತಮ್ಮ ರಾಜ್ಯಪಾಲರ ವಿರುದ್ಧದ ಹೋರಾಟಕ್ಕೆ ಯಡಿಯೂರಪ್ಪ ಚಾಲನೆ ನೀಡಿದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಚೆನ್ನಾಗಿದ್ದರೂ, ಜನರಿಂದ ಬಹುಮತ ಪಡೆದು ಆಯ್ಕೆಯಾಗಿರುವ ಸರಕಾರವನ್ನು ಬೀಳಿಸಲು ರಾಜ್ಯಪಾಲರು ಹೊರಟಿದ್ದಾರೆ. ಅವರ ಉದ್ದೇಶ ಆರು ತಿಂಗಳು ವಿಧಾನಸಭೆಯಲ್ಲಿ ಕುಳಿತು ರಾಜ್ಯಭಾರ ಮಾಡುವುದಾಗಿದೆ ಎಂದು ವ್ಯಂಗ್ಯವಾಡಿದರು.
ಯಡಿಯೂರಪ್ಪ ಅವರ ಜೊತೆಗಿರುವ ಆರೋಗ್ಯ ಸಚಿವ ಶ್ರೀರಾಮುಲು ಅವರು ಶ್ರೀ ಉರುಕುಂದ ಈರಣ್ಣ ಸ್ವಾಮಿ ಲಾರಿಯ ಮೇಲೆ ಹತ್ತಿ, ರಾಷ್ಟ್ರಪತಿ ಆಳ್ವಿಕೆಯ ಶಿಫಾರಸನ್ನು ವಿರೋಧಿಸಬೇಕೆಂದು ಜನರಲ್ಲಿ ಮನವಿ ಮಾಡಿದರು. ಬಿಜೆಪಿಯ ಹೋರಾಟವನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಒಟ್ಟು ಎರಡು ತಂಡಗಳನ್ನು ಕಟ್ಟಿದ್ದು, ಒಂದೊಂದು ತಂಡಕ್ಕೆ ಯಡಿಯೂರಪ್ಪ ಮತ್ತು ಕೆಎಸ್ ಈಶ್ವರಪ್ಪ ನೇತೃತ್ವ ವಹಿಸಿದ್ದಾರೆ. ಯಡಿಯೂರಪ್ಪ ರಾಯಚೂರು (ಮೇ 21), ಮಂಗಳೂರು (ಮೇ 22), ತುಮಕೂರು (ಮೇ 23), ಕೋಲಾರ (ಮೇ 24) ಮತ್ತು ಬಾಗಲಕೋಟ (ಮೇ 25) ಸಂಚರಿಸಲಿದ್ದಾರೆ. ಈಶ್ವರಪ್ಪ ಮೈಸೂರು (ಮೇ 21), ಚಿತ್ರದುರ್ಗ ಮತ್ತು ಬಳ್ಳಾರಿ (ಮೇ 22), ಕೊಪ್ಪಳ (ಮೇ 23), ಗುಲಬರ್ಗಾ (ಮೇ 24) ಮತ್ತು ಬೀದರ್ (ಮೇ 25)ಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications