ರಾಜ್ಯಪಾಲರ ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಕಸದಬುಟ್ಟಿಗೆ

ರಾಜ್ಯಪಾಲರ ಶಿಫಾರಸನ್ನು ತಿರಸ್ಕರಿಸಿರುವ ಪತ್ರವನ್ನು ಅಧಿಕೃತವಾಗಿ ರವಾನಿಸಲಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ನಿರಾಳವಾಗಿ ಉಸಿರಾಡುವಂತಾಗಿದೆ ಮತ್ತು ಯಡಿಯೂರಪ್ಪ ಐದನೇ ಬಾರಿ ಜೀವದಾನ ಪಡೆದಂತಾಗಿದೆ. ಪ್ರಧಾನಿ ನೇತೃತ್ವದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಶಿಫಾರಸನ್ನು ಕೇಂದ್ರ ತಿರಸ್ಕರಿಸಿದೆಯಾದರೂ ರಾಜ್ಯದ ಆಡಳಿತದಲ್ಲಿ ಬದಲಾವಣೆಗಳನ್ನು ತರಲು ಕೆಲ ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
ಸಭೆಯ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಪಿ. ಚಿದಂಬರಂ ಅವರು, ರಾಜ್ಯಪಾಲ ಭಾರದ್ವಾಜ್ ಅವರು ಕಳಿಸಿದ್ದ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ, ಅವರ ಶಿಫಾರಸುಗಳನ್ನು ಸ್ವೀಕರಿಸದಿರಲು ಕೇಂದ್ರ ನಿರ್ಧರಿಸಿದೆ ಎಂದರು. ಆದರೆ, ರಾಜ್ಯಪಾಲರ ಪತ್ರದಲ್ಲಿದ್ದ ಅಂಶಗಳನ್ನು ಕೇಂದ್ರ ಪರಿಗಣಿಸಿದ್ದು, ರಾಜ್ಯ ಈ ಅಂಶಗಳ ಬಗ್ಗೆ ಗಮನಹಸುತ್ತದೆಂದು ಕೇಂದ್ರ ನಂಬಿದೆ ಎಂದು ಅವರು ಯಡಿಯೂರಪ್ಪನವರಿಗೆ ಸೂಚನೆ ನೀಡಿದರು.
16 ಶಾಸಕರ ಅನರ್ಹತೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಶಿಫಾರಸು ಮಾಡಿ ಕೇಂದ್ರಕ್ಕೆ ಪತ್ರ ಬರೆದಿದ್ದ ಹಂಸರಾಜ್ ಭಾರದ್ವಾಜ್ ಅವರಿಗೆ ಇದರಿಂದ ಭಾರೀ ಮುಖಭಂಗವಾದಂತಾಗಿದೆ. ಕೇಂದ್ರ ಕೂಡ ಒಂದು ವಾರ ಕಳೆದ ನಂತರ ಸಾಧ್ಯಾಸಾಧ್ಯತೆಗಳನ್ನು ಅಳೆದು ತೂಗಿ, ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರನ್ನು ಸಾಕಷ್ಟು ಗೋಳು ಹೊಯ್ದುಕೊಂಡು ಈ ನಿರ್ಧಾರಕ್ಕೆ ಬಂದಿದೆ.
ಶಿಫಾರಸು ತಿರಸ್ಕರಿಸಿದ್ದಕ್ಕೆ ಕೇಂದ್ರ ನೀಡಿರುವ ಕಾರಣಗಳ ವಿವರ ಇನ್ನೂ ತಿಳಿಯಬೇಕಿದೆ. ಆದರೆ, ಜನರಿಂದ ಬಹುಮತ ಪಡೆದು ಆಯ್ಕೆಯಾದ ಸರಕಾರವನ್ನು ವಜಾಗೊಳಿಸುವುದು ಅಷ್ಟು ಸುಲಭವಾದ ಮಾತಲ್ಲ ಎಂಬ ಸಂಗತಿಯಂತೂ ಕೇಂದ್ರಕ್ಕೆ ಮನವರಿಕೆಯಾಗಿರುವುದು ಇದರಿಂದ ಸಾಬೀತಾಗಿದೆ. ಇಷ್ಟೆಲ್ಲ ಆದ ಮೇಲೆ ರಾಜ್ಯಪಾಲರ ಮುಂದಿನ ನಡೆಯೇನು?
ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ ನಂತರ ಸರಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ನಾನಾ ಕಸರತ್ತು ಮಾಡಿತ್ತು. ಕೇಂದ್ರಕ್ಕೆ, ರಾಷ್ಟ್ರಪತಿಗೆ ಪತ್ರ ಬರೆದು, ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್ ಮುಂದೆ ಪರೇಡ್ ಕೂಡ ಮಾಡಿತ್ತು. ಕೇಂದ್ರದಿಂದ ಕೂಡಲೆ ಸಕಾರಾತ್ಮಕ ಪ್ರತಿಕ್ರಿಯೆ ಬಾರದ್ದರಿಂದ ರಾಜ್ಯವ್ಯಾಪಿ ಆಂದೋಲನವನ್ನು ಆರಂಭಿಸಿತ್ತು. ಜಂಟಿ ಅಧಿವೇಶನ ನಡೆಸಲು ಬಿಜೆಪಿಗೆ ಅನುಮತಿ ನೀಡಲು ರಾಜ್ಯಪಾಲರು ಸತಾಯಿಸಿದ್ದು ಗಾಯದ ಮೇಲೆ ಉಪ್ಪು ಸುರಿದಂತಾಗಿತ್ತು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications