ವಿಧಾನಮಂಡಲದ ಅಧಿವೇಶನಕ್ಕೆ ಇಂದು ಅಂಕಿತ ಸಾಧ್ಯತೆ

ತಮ್ಮ ಶಿಫಾರಸಿನ ಬಗ್ಗೆ ಕೇಂದ್ರ ಸರಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೂ ಅಧಿವೇಶನಕ್ಕೆ ಅನುಮತಿ ನೀಡುವುದಿಲ್ಲ ಎಂಬ ಧೋರಣೆ ರಾಜ್ಯಪಾಲರ ಹಂಸರಾಜ್ ಅವರದ್ದಾಗಿತ್ತು. ಇದೀಗ ಅವರ ಶಿಫಾರಸನ್ನು ಕೇಂದ್ರ ಸರಕಾರ ತಿರಸ್ಕರಿಸಿದ್ದು, ಸೋಮವಾರ ಅಧಿಕೃತವಾಗಿ ಮಾಹಿತಿ ರವಾನೆಯಾಗುವುದರಿಂದ ಅಧಿವೇಶನಕ್ಕೆ ಅನುಮತಿ ನೀಡುವ ನಿರೀಕ್ಷೆಯಿದೆ ಎನ್ನಲಾಗಿದೆ.
ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಶಿಫಾರಸು ಮಾಡಿ ರಾಜ್ಯಪಾಲರು ಈ ತಿಂಗಳ 16ರಂದು ಕಳುಹಿಸಿದ್ದ ವಿಶೇಷ ವರದಿಯನ್ನು ಭಾನುವಾರ ತಡರಾತ್ರಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸ್ಪಷ್ಟವಾಗಿ ತಿರಸ್ಕರಿಸಿದೆ.
ಈ ಬೆಳವಣಿಗೆಯಿಂದ ರಾಜ್ಯಪಾಲರ ಹಂಸರಾಜ್ ಭಾರಧ್ವಾಜ್ ಸೇರಿದಂತೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ತೀವ್ರ ಮುಖಭಂಗ ಉಂಟಾಗಿದ್ದು, ಬಿಜೆಪಿ ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಶತಾಯಗತಾಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲೇಬೇಕು ಎಂದು ಪಟ್ಟು ಹಿಡಿದು ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ನಾಯಕರ ಪೈಕಿ ಕೆಲವರು ಭಾನುವಾರ ರಾತ್ರಿ ಬೆಂಗಳೂರಿಗೆ ವಾಪಸಾದರು. ಅವರು ವಾಪಸಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅವರ ಬೇಡಿಕೆಯನ್ನು ತಳ್ಳಿ ಹಾಕಿ ಬಿಜೆಪಿ ಸರ್ಕಾರಕ್ಕೆ ಜೀವದಾನ ನೀಡಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications