Get Updates
Get notified of breaking news, exclusive insights, and must-see stories!

ಅಧಿವೇಶನಕ್ಕೆ ಅಸ್ತು; ರಾಜ್ಯಪಾಲರ ವಾಪಸ್ ಗೆ ಆಗ್ರಹ

Yeddyurappa, Bhardwaj
ನವದೆಹಲಿ, ಮೇ 23: ವಿಧಾನಮಂಡಲದ ಅಧಿವೇಶನವನ್ನು ಜೂನ್ 2 ರಿಂದ ನಡೆಸುವುದಕ್ಕೆ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಅಂಕಿತ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದ ಅಭಿವೃದ್ಧಿಗೆ ಕಂಟಕವಾಗಿರುವ ರಾಜ್ಯಪಾಲ ಭಾರಧ್ವಾಜ್‌ ಅವರನ್ನು ವಾಪಸ್ ಕರೆಸಿಕೊಳ್ಳುವಂತೆಯೂ ಅವರು ಕೇಂದ್ರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಶಿಫಾರಸು ಮಾಡಿ ರಾಜ್ಯಪಾಲರು ಈ ತಿಂಗಳ 16ರಂದು ಕಳುಹಿಸಿದ್ದ ವಿಶೇಷ ವರದಿಯನ್ನು ಕೇಂದ್ರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ತಾವು ಬಿಜೆಪಿ ಪಕ್ಷದ ವರಿಷ್ಠರು, ಗವರ್ನರ್ ಮತ್ತು ಕೇಂದ್ರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಯಡಿಯೂರಪ್ಪ ಅವರು ಇಂದು ಸಂಜೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ರಾಜ್ಯಪಾಲರ ಶಿಫಾರಸನ್ನು ಮಾನ್ಯ ಮಾಡದೆ ಜನಾದೇಶ ಸರಕಾರ ಮುಂದುವರಿಕೆಗೆ ಕೇಂದ್ರ ಸರಕಾರ ಅನುವು ಮಾಡಿಕೊಟ್ಟಿರುವುದು ಪ್ರಜಾತಂತ್ರಕ್ಕೆ ಸಂದ ಜಯ ಎಂದು ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಪ್ರತಿಪಕ್ಷಗಳು ರಾಜ್ಯದ ಅಭಿವೃದ್ಧಿಗೆ ಮಾರಕವಾಗುವ ಇಂತಹ ಪಿತೂರಿಗಳಿಂದ ದೂರವುಳಿಯುವಂತಾಗಲಿ ಎಂದು ಅವರು ಆಶಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+