ಕೆಪಿಎಲ್ ಗೆದ್ದ ವೀರನಿಗೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

ದೆಹಲಿಯಿಂದ ದಿಗ್ವಜಯಿಯಾಗಿ ಹಿಂದಿರುಗಿದ ಯಡಿಯೂರಪ್ಪನವರನ್ನು ಬಳ್ಳಾರಿ ರಸ್ತೆಯಲ್ಲಿನ ಬ್ಯಾಟರಾಯನಪುರದಿಂದ ಹೆಬ್ಬಾಳ, ಮೇಖ್ರಿ ವೃತ್ತ, ಕಾವೇರಿ ವೃತ್ತ, ಭಾಷ್ಯಂ ವೃತ್ತ, ಪಿಟೀಲು ಚೌಡಯ್ಯ ಭವನದ ಮುಖಾಂತರ ಬಿಜೆಪಿಯ ಹೊಸ ಕಚೇರಿಗೆ ತೆರೆದ ವಾಹನದಲ್ಲಿ ಕರೆತರಲಾಯಿತು.
ಈ ಮೆರವಣಿಗೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ ಅಮೂಲ್ಯ ಮತ ನೀಡಿದ ಮತದಾರರಿಗೇ ತೊಂದರೆಯಾಗುತ್ತದೆಂಬುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದರೆ ಚೆನ್ನಾಗಿತ್ತು. ರಸ್ತೆಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರಿಂದ ವಾಹನ ಸಂಚಾರಕ್ಕೂ ಭಾರೀ ಅಡತಡೆಯಾಯಿತು.
ತೆರೆದ ವಾಹನದಲ್ಲಿ ಯಡಿಯೂರಪ್ಪನವರ ಜೊತೆ ಆರ್ ಅಶೋಕ್, ಕೆಎಸ್ ಈಶ್ವರಪ್ಪ, ಸಿಟಿ ರವಿ, ಕಟ್ಟಾ ಸುಬ್ರಮಣ್ಯ ನಾಯ್ಡು, ಸದಾನಂದ ಗೌಡ ಮುಂತಾದವರು ಹಾಜರಿದ್ದು ಯಡಿಯೂರಪ್ಪನವರನ್ನು ಕರೆತಂದರು. ಬಿಜೆಪಿ ಕಚೇರಿ ಎದುರಿನಲ್ಲಿ ಪಟಾಕಿ ಸಿಡಿಸಿ, ಸ್ವೀಟ್ ಹಂಚಿ ಸಂಭ್ರಮಿಸಲಾಯಿತು.
ಪಂದ್ಯ ಗೆದ್ದಿದ್ದರೂ ನ್ಯಾಯಯುತವಾಗಿ ಆಟ ಆಡದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಅಂಪೈರ್ ಚಿದಂಬರಂ ಮೇಲೆ ಯಡಿಯೂರಪ್ಪ ಇನ್ನಷ್ಟು ಒತ್ತಡ ಹೇರಿದ್ದಾರೆ. ಇದಕ್ಕೆ ಕ್ಯಾರೆ ಅನ್ನದ ಚಿದಂಬರಂ ನೀವು ಆಡಿದ್ದೂ ಫೇರ್ ಪ್ಲೇ ಏನಲ್ಲ ಎಂದು ಗದರಿಸಿ ಕಳಿಸಿದ್ದಾರೆ.
ಪಂದ್ಯ ಗೆದ್ದಿದ್ದರೂ ಟ್ರೋಫಿ ಪಡೆಯುವಲ್ಲಿ ಸಂಪೂರ್ಣ ಸಫಲರಾಗದ ಯಡಿಯೂರಪ್ಪ, ರಾಜ್ಯಪಾಲರ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಮತ್ತೆ ಕಹಳೆಯೂದಿದ್ದಾರೆ. ಆದರೆ, ಜಗಳ ಯಾಕೆ ಸುಮ್ನೆ ಫ್ರೆಂಡ್ಲಿ ಮ್ಯಾಚ್ ಆಡಿಕೊಂಡು ಸುಖವಾಗಿರಿ ಎಂದು ವಾಪಸ್ ಕಳಿಸಿದ್ದಾರೆ.
ರಾಜ್ಯಪಾಲರು ಎಸೆದ ಗೂಗ್ಲಿಗೆ ಉತ್ತರ ಹೇಳಲು ತಡಕಾಡಿ, ಸೋಲಿನ ಅಂಚಿಗೆ ಬಂದು ನಿಂತಿದ್ದ ಯಡಿಯೂರಪ್ಪನವರಿಗೆ ಬೆಂಬಲ ನೀಡಿದ ಬಿಜೆಪಿ ನಾಯಕರಿಗೆ ಮತ್ತು ಅಂತಿಮ ಕ್ಷಣದಲ್ಲಿ ಹಾಗೂ ಹೀಗೂ ಗೆಲ್ಲಲು ಸಹಕರಿಸಿದ ಅಂಪೈರ್ ಗಳಿಗೆ ಧನ್ಯವಾದಗಳನ್ನು ಹೇಳುವುದನ್ನು ಯಡಿಯೂರಪ್ಪ ಮರೆಯಲಿಲ್ಲ.
ಯಡಿಯೂರಪ್ಪನವರು ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಗೆದ್ದಿದ್ದಾರೆ ಎಂದು ಅಂಪೈರ್ ಚಿದಂಬರಂ ಘೋಷಿಸಿದ್ದರೂ, ವಿರೋಧ ಪಕ್ಷದ ಹಂಸರಾಜ್ ಭಾರದ್ವಾಜ್ ಸೋತಿದ್ದಾರೆ ಎಂದು ಒಪ್ಪಲು ತಯಾರಿಲ್ಲದ್ದರಿಂದ ಗೆದ್ದವರಿಗೆ ಭಾರೀ ಇರುಸುಮುರುಸಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications