ಕೆಪಿಎಲ್ ಗೆದ್ದ ವೀರನಿಗೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

ದೆಹಲಿಯಿಂದ ದಿಗ್ವಜಯಿಯಾಗಿ ಹಿಂದಿರುಗಿದ ಯಡಿಯೂರಪ್ಪನವರನ್ನು ಬಳ್ಳಾರಿ ರಸ್ತೆಯಲ್ಲಿನ ಬ್ಯಾಟರಾಯನಪುರದಿಂದ ಹೆಬ್ಬಾಳ, ಮೇಖ್ರಿ ವೃತ್ತ, ಕಾವೇರಿ ವೃತ್ತ, ಭಾಷ್ಯಂ ವೃತ್ತ, ಪಿಟೀಲು ಚೌಡಯ್ಯ ಭವನದ ಮುಖಾಂತರ ಬಿಜೆಪಿಯ ಹೊಸ ಕಚೇರಿಗೆ ತೆರೆದ ವಾಹನದಲ್ಲಿ ಕರೆತರಲಾಯಿತು.
ಈ ಮೆರವಣಿಗೆಯಿಂದಾಗಿ ಟ್ರಾಫಿಕ್ ಜಾಮ್ ಆಗಿ ಅಮೂಲ್ಯ ಮತ ನೀಡಿದ ಮತದಾರರಿಗೇ ತೊಂದರೆಯಾಗುತ್ತದೆಂಬುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದರೆ ಚೆನ್ನಾಗಿತ್ತು. ರಸ್ತೆಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರಿಂದ ವಾಹನ ಸಂಚಾರಕ್ಕೂ ಭಾರೀ ಅಡತಡೆಯಾಯಿತು.
ತೆರೆದ ವಾಹನದಲ್ಲಿ ಯಡಿಯೂರಪ್ಪನವರ ಜೊತೆ ಆರ್ ಅಶೋಕ್, ಕೆಎಸ್ ಈಶ್ವರಪ್ಪ, ಸಿಟಿ ರವಿ, ಕಟ್ಟಾ ಸುಬ್ರಮಣ್ಯ ನಾಯ್ಡು, ಸದಾನಂದ ಗೌಡ ಮುಂತಾದವರು ಹಾಜರಿದ್ದು ಯಡಿಯೂರಪ್ಪನವರನ್ನು ಕರೆತಂದರು. ಬಿಜೆಪಿ ಕಚೇರಿ ಎದುರಿನಲ್ಲಿ ಪಟಾಕಿ ಸಿಡಿಸಿ, ಸ್ವೀಟ್ ಹಂಚಿ ಸಂಭ್ರಮಿಸಲಾಯಿತು.
ಪಂದ್ಯ ಗೆದ್ದಿದ್ದರೂ ನ್ಯಾಯಯುತವಾಗಿ ಆಟ ಆಡದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಅಂಪೈರ್ ಚಿದಂಬರಂ ಮೇಲೆ ಯಡಿಯೂರಪ್ಪ ಇನ್ನಷ್ಟು ಒತ್ತಡ ಹೇರಿದ್ದಾರೆ. ಇದಕ್ಕೆ ಕ್ಯಾರೆ ಅನ್ನದ ಚಿದಂಬರಂ ನೀವು ಆಡಿದ್ದೂ ಫೇರ್ ಪ್ಲೇ ಏನಲ್ಲ ಎಂದು ಗದರಿಸಿ ಕಳಿಸಿದ್ದಾರೆ.
ಪಂದ್ಯ ಗೆದ್ದಿದ್ದರೂ ಟ್ರೋಫಿ ಪಡೆಯುವಲ್ಲಿ ಸಂಪೂರ್ಣ ಸಫಲರಾಗದ ಯಡಿಯೂರಪ್ಪ, ರಾಜ್ಯಪಾಲರ ವಿರುದ್ಧ ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ಮತ್ತೆ ಕಹಳೆಯೂದಿದ್ದಾರೆ. ಆದರೆ, ಜಗಳ ಯಾಕೆ ಸುಮ್ನೆ ಫ್ರೆಂಡ್ಲಿ ಮ್ಯಾಚ್ ಆಡಿಕೊಂಡು ಸುಖವಾಗಿರಿ ಎಂದು ವಾಪಸ್ ಕಳಿಸಿದ್ದಾರೆ.
ರಾಜ್ಯಪಾಲರು ಎಸೆದ ಗೂಗ್ಲಿಗೆ ಉತ್ತರ ಹೇಳಲು ತಡಕಾಡಿ, ಸೋಲಿನ ಅಂಚಿಗೆ ಬಂದು ನಿಂತಿದ್ದ ಯಡಿಯೂರಪ್ಪನವರಿಗೆ ಬೆಂಬಲ ನೀಡಿದ ಬಿಜೆಪಿ ನಾಯಕರಿಗೆ ಮತ್ತು ಅಂತಿಮ ಕ್ಷಣದಲ್ಲಿ ಹಾಗೂ ಹೀಗೂ ಗೆಲ್ಲಲು ಸಹಕರಿಸಿದ ಅಂಪೈರ್ ಗಳಿಗೆ ಧನ್ಯವಾದಗಳನ್ನು ಹೇಳುವುದನ್ನು ಯಡಿಯೂರಪ್ಪ ಮರೆಯಲಿಲ್ಲ.
ಯಡಿಯೂರಪ್ಪನವರು ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಗೆದ್ದಿದ್ದಾರೆ ಎಂದು ಅಂಪೈರ್ ಚಿದಂಬರಂ ಘೋಷಿಸಿದ್ದರೂ, ವಿರೋಧ ಪಕ್ಷದ ಹಂಸರಾಜ್ ಭಾರದ್ವಾಜ್ ಸೋತಿದ್ದಾರೆ ಎಂದು ಒಪ್ಪಲು ತಯಾರಿಲ್ಲದ್ದರಿಂದ ಗೆದ್ದವರಿಗೆ ಭಾರೀ ಇರುಸುಮುರುಸಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications