ರಾಜ್ಯಪಾಲರ ರಾಜೀನಾಮೆಗೆ ಕಾಂಗ್ರೆಸ್ ಬಣದಿಂದಲೇ ಆಗ್ರಹ

ಪಕ್ಷದ ಮುಖಂಡ, ಮಾಜಿ ಸಂಸದ ಪಿ.ಕೋದಂಡರಾಮಯ್ಯ, ಮುಖಂಡ ಬಿ.ಆರ್.ಪಾಟೀಲ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯಪಾಲರ ರಾಜೀನಾಮೆ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸದ್ಯವೇ ದೆಹಲಿಗೆ ನಿಯೋಗ ಹೋಗುವುದಾಗಿ ಹೇಳಿದರು.
ಕಾಂಗ್ರೆಸ್ ನಾಯಕರು ಪದೇ ಪದೇ ರಾಜಭವನಕ್ಕೆ ಹೋಗುವುದನ್ನು ಬಿಟ್ಟು ಜನರ ಬಳಿಗೆ ಹೋಗಬೇಕಾಗಿತ್ತು. ಅದು ಮಾಡದಿರುವುದೇ ತಪ್ಪಾಗಿದೆ ಎಂದರು. ಪಕ್ಷದ ಮುಖಂಡ ಸುಭಾಷ್ಚಂದ್ರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಮಾಡಿದ ಎರಡನೇ ಬಾರಿ ಶಿಫಾರಸನ್ನು ತಳ್ಳಿ ಹಾಕುವುದರ ಮೂಲಕ ಕೇಂದ್ರ ಯುಪಿಎ ಸರ್ಕಾರ ಸರಿಯಾದ ನಿರ್ಧಾರವನ್ನೇ ಕೈಗೊಂಡಿದೆ. ಇಂತಹ ಕ್ರಮದ ಮೂಲಕ ರಾಜ್ಯಪಾಲರು ಜೋಕರ್ ಅಂತೆ ವರ್ತಿಸಿದ್ದಾರೆ. ಅಧಿವೇಶವನ್ನು ಕರೆಯುವ ಸಂಬಂಧ ಸಂಪುಟದ ನಿರ್ಧಾರವನ್ನು ಮಾನ್ಯ ಮಾಡದೇ ಇರುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ. ಅಧಿವೇಶನ ನಡೆಸಲು ರಾಜ್ಯಪಾಲರು ಏಕೆ ಅಡ್ಡಿಪಡಿಸಿದರು ಎಂದು ಈ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ದೇವೇಗೌಡರ ತಾಳಕ್ಕೆ ತಕ್ಕಂತೆ ಕುಣಿದು ಹಾಳಾಗಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಕಿವಿ ಮಾತು ಹೇಳಿದ ಅವರು, ಗೌಡರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬೇರೆಯವರನ್ನು ಬಳಸಿಕೊಳ್ಳುತ್ತಾರೆ. ತಮಗೆ ಯಾವಾಗ ಯಾರು ಉಪಯೋಗ ಆಗುವುದಿಲ್ಲವೋ ಆಗ ಕಿತ್ತು ಬಿಸಾಕುತ್ತಾರೆ. ಇದು ಕಾಂಗ್ರೆಸ್ ನಾಯಕರಿಗೆ ತಿಳಿದಿರಬೇಕು ಎಂದು ಹೇಳಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications