ರಾಜ್ಯಪಾಲರ ರಾಜೀನಾಮೆಗೆ ಕಾಂಗ್ರೆಸ್‌ ಬಣದಿಂದಲೇ ಆಗ್ರಹ

Bharadwaj
ಬೆಂಗಳೂರು, ಮೇ 25: ರಾಜ್ಯ ಕಾಂಗ್ರೆಸ್ಸಿನಲ್ಲಿರುವ ಸಮಾನ ಮನಸ್ಕ ಬಣವೊಂದು ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಅವರ ರಾಜೀನಾಮೆಗೆ ಆಗ್ರಹಿಸಿದೆ. ಇದೇ ವೇಳೆ, ಯಡಿಯೂರಪ್ಪ ಸರ್ಕಾರ ವಜಾಕ್ಕೆ ಆಗ್ರಹಿಸಿ ಬೀದಿಗಿಳಿದ ಕಾಂಗ್ರೆಸ್ಸಿಗರನ್ನು ತರಾಟೆಗೆ ತೆಗೆದುಕೊಂಡಿದೆ.

ಪಕ್ಷದ ಮುಖಂಡ, ಮಾಜಿ ಸಂಸದ ಪಿ.ಕೋದಂಡರಾಮಯ್ಯ, ಮುಖಂಡ ಬಿ.ಆರ್‌.ಪಾಟೀಲ್‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯಪಾಲರ ರಾಜೀನಾಮೆ ಪಡೆಯುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸದ್ಯವೇ ದೆಹಲಿಗೆ ನಿಯೋಗ ಹೋಗುವುದಾಗಿ ಹೇಳಿದರು.

ಕಾಂಗ್ರೆಸ್‌ ನಾಯಕರು ಪದೇ ಪದೇ ರಾಜಭವನಕ್ಕೆ ಹೋಗುವುದನ್ನು ಬಿಟ್ಟು ಜನರ ಬಳಿಗೆ ಹೋಗಬೇಕಾಗಿತ್ತು. ಅದು ಮಾಡದಿರುವುದೇ ತಪ್ಪಾಗಿದೆ ಎಂದರು. ಪಕ್ಷದ ಮುಖಂಡ ಸುಭಾಷ್‌ಚಂದ್ರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸುವಂತೆ ಮಾಡಿದ ಎರಡನೇ ಬಾರಿ ಶಿಫಾರಸನ್ನು ತಳ್ಳಿ ಹಾಕುವುದರ ಮೂಲಕ ಕೇಂದ್ರ ಯುಪಿಎ ಸರ್ಕಾರ ಸರಿಯಾದ ನಿರ್ಧಾರವನ್ನೇ ಕೈಗೊಂಡಿದೆ. ಇಂತಹ ಕ್ರಮದ ಮೂಲಕ ರಾಜ್ಯಪಾಲರು ಜೋಕರ್ ಅಂತೆ ವರ್ತಿಸಿದ್ದಾರೆ. ಅಧಿವೇಶವನ್ನು ಕರೆಯುವ ಸಂಬಂಧ ಸಂಪುಟದ ನಿರ್ಧಾರವನ್ನು ಮಾನ್ಯ ಮಾಡದೇ ಇರುವ ಅಧಿಕಾರ ರಾಜ್ಯಪಾಲರಿಗೆ ಇಲ್ಲ. ಅಧಿವೇಶನ ನಡೆಸಲು ರಾಜ್ಯಪಾಲರು ಏಕೆ ಅಡ್ಡಿಪಡಿಸಿದರು ಎಂದು ಈ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ದೇವೇಗೌಡರ ತಾಳಕ್ಕೆ ತಕ್ಕಂತೆ ಕುಣಿದು ಹಾಳಾಗಬೇಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಕಿವಿ ಮಾತು ಹೇಳಿದ ಅವರು, ಗೌಡರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬೇರೆಯವರನ್ನು ಬಳಸಿಕೊಳ್ಳುತ್ತಾರೆ. ತಮಗೆ ಯಾವಾಗ ಯಾರು ಉಪಯೋಗ ಆಗುವುದಿಲ್ಲವೋ ಆಗ ಕಿತ್ತು ಬಿಸಾಕುತ್ತಾರೆ. ಇದು ಕಾಂಗ್ರೆಸ್‌ ನಾಯಕರಿಗೆ ತಿಳಿದಿರಬೇಕು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+