ಮಗಳ ಮದ್ವೆ ಮಾಡಿಸಬೇಕು, ಜಾಮೀನು ಕೊಡಿ ತಂದೇ

ಪತ್ನಿ -ಪುತ್ರಿಯ ಯೋಗಕ್ಷೇಮ ಹಾಗೂ ತನ್ನ ಆರೋಗ್ಯ ಸ್ಥಿತಿ ಸುಧಾರಣೆಗಾಗಿ ಜೈಲಿನಿಂದ ಹೊರಗೆ ಹೋಗಲು ಜಾಮೀನು ನೀಡುವಂತೆ ಮನವಿ ಮಾಡಿ ಅಬ್ದುಲ್ ಕರೀಂ ಲಾಲಾ ತೆಲಗಿ ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೇಶವ್ ನಾರಾಯಣ್ ಅವರು, ತೆಲಗಿ ಆರೋಗ್ಯ ಸ್ಥಿತಿ ಕುರಿತು ಮೇ 31ರೊಳಗೆ ನ್ಯಾಯಾಲಯಕ್ಕೆ ವರದಿ ನೀಡುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಆದೇಶ ನೀಡಿದರು.
ಏಡ್ಸ್ ಸೇರಿದಂತೆ ಹಲವು ರೋಗಗಳಿಂದ ನರಳುತ್ತಿರುವುದಾಗಿ ಆತ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾನೆ. ಜತೆಗೆ ಪತ್ನಿಯ ಅನಾರೋಗ್ಯ ಪೀಡಿತರಾಗಿದ್ದಾರೆ. ಮಗಳ ಶಿಕ್ಷಣ ಕುಂಠಿತಗೊಂಡಿದ್ದು, ಆಕೆಗೆ ವಿವಾಹ ಮಾಡಬೇಕಿದೆ. ನಾನು ಜೈಲಿನಲ್ಲಿದ್ದರೆ ಮಗಳನ್ನು ವಿವಾಹ ಮಾಡಿಕೊಳ್ಳಲು ಯಾರೂ ಮುಂದೆ ಬರುವುದಿಲ್ಲ ಎಂಬುದು ತೆಲಗಿಯ ಅಳಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತೆಲಗಿ ಹಾಗೂ ಅವನ ಸಹಚರರ ವಿರುದ್ಧ 42 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 9 ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. 9ರ ಪೈಕಿ ಕೆಲವು ಪ್ರಕರಣಗಳಲ್ಲಿ ತೆಲಗಿಗೆ ಜೀವಾವಧಿ ಶಿಕ್ಷೆಯಾಗಿದೆ.
ಇನ್ನೂ ಕೆಲವು ಪ್ರಕರಣ ವಿಚಾರಣೆ ಹಂತದಲ್ಲಿವೆ. ಜೈಲಿನಿಂದ ಹೊರಗೆ ಬರಲು ಕಳೆದ 9 ವರ್ಷದಿಂದ ಸತತ ಪ್ರಯತ್ನ ನಡೆಸುತ್ತಿರುವ ತೆಲಗಿ, ಈ ಬಾರಿ ಪತ್ನಿ-ಪುತ್ರಿಯನ್ನು ಮುಂದಿಟ್ಟುಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications