ಎಟಿಎಂ ದೋಚಲು ಹೋದ ಗುಲ್ಬರ್ಗ ಪೊಲೀಸ್ ಅರೆಸ್ಟ್

ಇವರು ಘನಂದಾರಿ ಕೆಲಸ ಏನ್ಮಾಡಿದರೆಂದರೆ... ಪಟ್ಟಣದ ಮುಖ್ಯ ಬೀದಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪೇದೆಗಳಾದ ವೆಂಕಟೇಶ ಗುಲಬರ್ಗಾ ಹಾಗೂ ಅಂಬಾರಾಯ ಚಿಂಚನಸೂರ ಗುರುವಾರ ನಸುಕಿನ 3.52ಕ್ಕೆ ಎಟಿಎಂ ಕೇಂದ್ರಕ್ಕೆ ನುಗ್ಗಿ ಎಟಿಎಂ ಬಾಕ್ಸ್ ಒಡೆದು, ಹಣ ದೋಚುವ ಪ್ರಯತ್ನ ಫಲಕಾರಿಯಾಗದಿದ್ದಾಗ ಬಿಟ್ಟು ಪರಾರಿಯಾಗಿದ್ದಾರೆ.
ಪ್ರಕರಣದ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕ ಎಂ.ಕೆ.ಪ್ರಧಾನ್ ಸ್ಥಳಿಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಶರಣಬಸವೇಶ್ವರ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ ಮಧುಕರ ಪವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.












Click it and Unblock the Notifications