ಮೈಸೂರು ಮೃಗಾಲಯದಲ್ಲಿ ಹೆಚ್ಚಿದ ದತ್ತು ಸ್ವೀಕಾರ

1995ರಲ್ಲಿ ಪ್ರಾಣಿ ಪಕ್ಷಿಗಳ ದತ್ತು ಸ್ವೀಕಾರ ಮೈಸೂರಿನಲ್ಲಿ ಆರಂಭವಾಗಿತ್ತು. ಆದರೆ ಆರಂಭದ ವರ್ಷಗಳಲ್ಲಿ ಅದು ಅಷ್ಟೇನೂ ಜನಪ್ರಿಯವಾಗಿರಲಿಲ್ಲ. ಆದರೆ ಇತ್ತಿಚಿನ ಒಂದೆರಡು ವರ್ಷಗಳಲ್ಲಿ ಪ್ರಾಣಿಗಳ ದತ್ತು ಸ್ವೀಕರಿಸುವ ಕ್ರೇಝ್ ಹೆಚ್ಚಾಗಿತ್ತು.
ಇದರ ಪರಿಣಾಮವಾಗಿ ಕಳೆದ ವರ್ಷ ಮೈಸೂರು ಮೃಗಾಲಯದ ಸುಮಾರು 394 ಪ್ರಾಣಿ ಪಕ್ಷಿಗಳಿಗೆ ದತ್ತು ಸ್ವೀಕಾರದ ಭಾಗ್ಯ ದೊರಕಿದೆ. 2010-11ರ ಆರ್ಥಿಕ ವರ್ಷದಲ್ಲಿ ಪ್ರಾಣಿಪಕ್ಷಿಗಳ ದತ್ತು ಸ್ವೀಕಾರದಿಂದ ಮೈಸೂರು ಮೃಗಾಲಯ ಸುಮಾರು 30.2 ಲಕ್ಷ ರು. ಸಂಗ್ರಹಿಸಿದೆ.
ಆದರೆ ತಾವರೆಕೊಪ್ಪದಲ್ಲಿ ಮೈಸೂರು ಮೃಗಾಲಯಕ್ಕಿಂತ ಹೆಚ್ಚು ಹುಲಿಗಳಿದ್ದರೂ ಇಲ್ಲಿ ದತ್ತು ಯೋಜನೆ ಹೆಚ್ಚು ಜನಪ್ರಿಯವಾಗಿಲ್ಲ ಎಂದು ದಿ ಹಿಂದು ವರದಿ ಮಾಡಿದೆ. ಪ್ರಾಣಿ ದತ್ತು ತೆಗೆದುಕೊಳ್ಳುವಂತೆ ಸೆಲೆಬ್ರಿಟಿಗಳನ್ನು ಆಕರ್ಷಿಸಲು ಪ್ರಯತ್ನ ಮಾಡುತ್ತಿರುವುದಾಗಿ ಅಲ್ಲಿನ ಅಧಿಕಾರಿಗಳು ಹೇಳುತ್ತಾರೆ.
ಇತ್ತೀಚೆಗೆ ಈ ಯೋಜನೆಯ ಜನಪ್ರಿಯತೆಗೆ ಕ್ರಿಕೆಟ್ ಆಟಗಾರರು, ಸಿನಿಮಾ ನಟನಟಿಯರು, ರಾಜಕಾರಣಿಗಳು ಮತ್ತು ಉದ್ಯಮಿಗಳು ಕೂಡ ಕಾರಣ. ಅನಿಲ್ ಕುಂಬ್ಲೆ ಜಿರಾಫೆ ಮರಿಯೊಂದನ್ನು ಮತ್ತು ಏಷ್ಯಾದ ಸಿಂಹವೊಂದನ್ನು ದತ್ತು ತೆಗೆದುಕೊಂಡಿದ್ದಾರೆ.
ಜಾವಗಲ್ ಶ್ರೀನಾಥ್ ಒಂದು ಚಿರತೆಯನ್ನು ದತ್ತು ತೆಗೆದುಕೊಂಡಿದ್ದಾರೆ. ಇದರಿಂದ ಉತ್ಸಾಹ ಪಡೆದ ಜಹೀರ್ ಖಾನ್ ಹುಲಿಯೊಂದನ್ನು ದತ್ತು ಪಡೆದಿದ್ದು ಅದಕ್ಕೆ ಸುಮಾರು 1 ಲಕ್ಷ ರು. ವಿನಿಯೋಗಿಸಿದ್ದಾರೆ.
ಪ್ರಾಣಿಗಳ ದತ್ತು ಸ್ವೀಕಾರದಲ್ಲಿ ರಾಜಕಾರಣಿಗಳೂ ಹಿಂದೆ ಬಿದ್ದಿಲ್ಲ. ಅಮೂಲ್ಯ ಎಂಬ ಹುಲಿಯನ್ನು ಸತತ ಮೂರನೇ ವರ್ಷಬಿ. ಎಸ್. ಯಡಿಯೂರಪ್ಪ ದತ್ತು ತೆಗೆದುಕೊಂಡಿದ್ದಾರೆ.
ಡಿ. ಕೆ. ಶಿವಕುಮಾರ್ ಒಂದು ಗೊರಿಲ್ಲಾ ದತ್ತು ತೆಗೆದುಕೊಂಡಿದ್ದಾರೆ. ಜೊತೆಗೆ ಎರಡು ಕಿಂಗ್ ಕೋಬ್ರಾಗಳಿಗೆ ಒಂದು ಲಕ್ಷ ರು. ನೀಡಿ ಅಜೀವ ದತ್ತು ಸ್ವೀಕಾರ ಮಾಡಿದ್ದಾರೆ. ಕನ್ನಡ ಚಿತ್ರನಟ ದರ್ಶನ್ ಆನೆಯ ಮರಿಯನ್ನು ದತ್ತು ತೆಗೆದುಕೊಂಡಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications