ಸುಷ್ಮಾ ಸಮರ: ನಿತಿನ್ ಗಡ್ಕರಿ ಡ್ಯಾಮೇಜ್ ಕಂಟ್ರೋಲ್

ಕರ್ನಾಟಕಕ್ಕೆ ಸಂಬಂಧಿಸಿದಂತೆ ನಾನು ಪಕ್ಷದ ಅಧ್ಯಕ್ಷನಾಗಿದ್ದಾಗ ತೆಗೆದುಕೊಂಡ ಎಲ್ಲ ತೀರ್ಮಾನಗಳಿಗೂ ನನ್ನ ಸಮ್ಮತಿ ಇತ್ತು. ರೆಡ್ಡಿ ಸಹೋದರರನ್ನು ಮಂತ್ರಿ ಗಳನ್ನಾಗಿ ಮಾಡುವುದಕ್ಕೆ ಆ ಸಂದರ್ಭಲ್ಲಿ ಕೆಲವು ರಾಜಕೀಯ ಒತ್ತಡಗಳು ಇದ್ದವು' ಎಂದೂ ಗಡ್ಕರಿ ಹೇಳಿದ್ದಾರೆ.
ಲೋಕಸಭೆ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ತಮ್ಮ ಪಕ್ಷದ ಮುಖಂಡರಿಗೇ ಬಿಸಿ ಮುಟ್ಟಿಸಿದ್ದರು. ಬಳ್ಳಾರಿ ರೆಡ್ಡಿ ಸಹೋದರರ ರಾಜಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ತಮ್ಮ ಸಹೊದ್ಯೋಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕಿ ಅರುಣ್ ಜೇಟ್ಲಿ ಮೇಲೆ ಆರೋಪ ಮಾಡಿದ್ದರು. ಸುಷ್ಮಾ ಏಕೆ ಸಮರದ ಹಾದಿ ತುಳಿದಿದ್ದಾರೆ ಎಂಬ ಕುರಿತು ಬಿಜೆಪಿ ನಾಯಕರು ಅಚ್ಚರಿಗೊಂಡಿದ್ದಾರೆ.
ಅಲ್ಲದೆ, ಯಡಿಯೂರಪ್ಪ ಅತ್ಯಂತ ನೆಮ್ಮದಿಯಾಗಿ ಮುಖ್ಯಮಂತ್ರಿ ಕುರ್ಚಿ ಯಲ್ಲಿ ಕುಳಿತಿರುವ ಸಂದರ್ಭದಲ್ಲಿ ರೆಡ್ಡಿಗಳ ಮಾತು ಏಕೆ ಬಂತು ಎಂಬುದೇ ಅರ್ಥವಾಗದ ಸಂಗತಿ. ಜೇಟ್ಲಿ ಅವರನ್ನು ಮಾತ್ರವಲ್ಲ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನೂ ಸುಷ್ಮಾ ಕೆಣಕಿದ್ದರು. ಮೋದಿ ಯಾವುದನ್ನೂ ಇಟ್ಟುಕೊಳ್ಳದೆ ಸುಷ್ಮಾ ಅವರಿಗೆ ವಾಪಸ್ ಕೊಟ್ಟರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸುಷ್ಮಾ ಅವರ ನಡವಳಿಕೆ ಬಿಜೆಪಿ ನಾಯಕತ್ವಕ್ಕೆ ನುಂಗಲಾರದ ತುತ್ತಾಗಿದೆ. ಬಿಜೆಪಿ ಒಳಗಿನ ಗುಂಪುಗಾರಿಕೆಗೆ ಸಾಕ್ಷಿಯಾಗಿದೆ.
ಸುಷ್ಮಾ ಮತ್ತು ಜೇಟ್ಲಿ ನಡುವಣ ಶೀತಲ ಸಮರ ಹೊಸದೇನೂ ಅಲ್ಲ. ಈಗ ಅದು ಬೀದಿಗೆ ಬರುವ ಮೂಲಕ ಮತ್ತೊಂದು ಮಜಲು ಮುಟ್ಟಿದೆ. ಮಿಗಿಲಾಗಿ ಬಿಜೆಪಿ ನಾಯಕರನ್ನು ಇಕ್ಕಟ್ಟಿಗೆ ಸಿಕ್ಕಿಸಿದೆ. ಸುಷ್ಮಾ ಹೇಳಿಕೆ ಕರ್ನಾಟಕ ರಾಜಕಾರಣ ಕುರಿತದ್ದು. ಆದರೆ, ಪರಿಣಾಮ ಮಾತ್ರ ರಾಷ್ಟ್ರಮಟ್ಟದ್ದು. ಬಿಜೆಪಿ ಹಿರಿಯ ನಾಯಕಿ ಕಾರಣ ಅಥವಾ ಪ್ರಚೋದನೆಯೇ ಇಲ್ಲದೆ ಯಾಕೆ ಜೇಟ್ಲಿ ಕಾಲೆಳೆದಿದ್ದಾರೆ ಎಂಬ ಕುತೂಹಲದ ಚರ್ಚೆ ಈಗ ಎಲ್ಲೆಡೆ.
ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಅವರ ಉತ್ತರಾಧಿಕಾರಿ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಡೆದಿರುವ ಕಿತ್ತಾಟ ಇದು ಎಂದು ವ್ಯಾಖ್ಯಾನಿಸಲಾಗುತ್ತಿದೆ. ಆದರೆ, ಅಡ್ವಾಣಿ ರಾಜಕಾರಣದಲ್ಲಿ ಇನ್ನೂ ಸಕ್ರಿಯರಾಗಿರುವುದರಿಂದ ಉತ್ತರಾಧಿಕಾರಿ ಪ್ರಶ್ನೆ ಉದ್ಭವಿಸುವುದಿಲ್ಲ. ಅಲ್ಲದೆ, ಚುನಾವಣೆಗೆ ಇನ್ನೂ ಮೂರು ವರ್ಷ ಇದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications