ರೆಡ್ಡಿ ವಿಷಯದಲ್ಲಿ ಮೃದುಧೋರಣೆ ತಾಳಿದ ಸುಷ್ಮಾ

ಯಡಿಯೂರಪ್ಪ ಮತ್ತು ಬಿಜೆಪಿ ಮಾಜಿ ರಾಷ್ಟ್ರಾಧ್ಯಕ್ಷ ರಾಜನಾಥ ಸಿಂಗ್ ಅವರೇ ಸ್ಪಷ್ಟನೆ ನೀಡಿದ ಮೇಲೆ ನನ್ನದೇನಿದೆ. ಇದರಲ್ಲಿ ಮತ್ತೆ ಮಾತನಾಡುವುದೇನಿಲ್ಲ. ವಿವಾದ ಇಲ್ಲಿಗೆ ಬಗೆಹರಿದಂತಾಗಿದೆ. ಹಾಗೆಯೆ, ತಮ್ಮ ಮತ್ತು ಅರುಣ್ ಜೇಟ್ಲಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಅದು ಪತ್ರಿಕೆಗಳು ಸೃಷ್ಟಿಸಿದ್ದು ಎಂದು ಹೇಳಿ ಹೊತ್ತಿರುವ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.
ಔಟ್ ಲುಕ್ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ, ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ರೆಡ್ಡಿ ಸಹೋದರರು ರಾಜಕೀಯವಾಗಿ ಬೆಳೆಯುವಲ್ಲಿ ತಮ್ಮ ಕೈವಾಡವಿಲ್ಲ. ಅವರನ್ನು ಯಡಿಯೂರಪ್ಪ ಸಂಪುಟಕ್ಕೆ ಸೇರಿಸಿದ್ದೆ ಅರುಣ್ ಜೇಟ್ಲಿ ಎಂದು ಹೇಳಿ ಜೇಟ್ಲಿಯವರೊಂದಿಗೆ ಸುಷ್ಮಾ ಸ್ವರಾಜ್ ವಿರಸ ಕಟ್ಟಿಕೊಂಡಿದ್ದರು.
ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಅವರ ವಿರುದ್ಧ ಸ್ಪರ್ಧಿಸಿದಾಗಿನಿಂದ ರೆಡ್ಡಿ ಸಹೋದರರೊಂದಿಗೆ ತಮ್ಮ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು ಮತ್ತು ರೆಡ್ಡಿ ಸಹೋದರರು ಸುಷ್ಮಾ ಅವರನ್ನು 'ಅಮ್ಮ' ಅಂತಲೇ ಕರೆಯುತ್ತಿದ್ದರು. ರೆಡ್ಡಿಗಳು ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದಾಗ ಸುಷ್ಮಾ ಅವರೇ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಆದರೆ ಸಂದರ್ಶನದಲ್ಲಿ ಆವೇಶಭರಿತ ಹೇಳಿಕೆ ನೀಡಿದ್ದು ಸಾಕಷ್ಟು ಇರುಸುಮುರುಸು ತಂದಿತ್ತು.
ರೆಡ್ಡಿಗಳನ್ನು ಸಂಪುಟಕ್ಕೆ ಸೇರಿಸಿದ್ದು ಸುಷ್ಮಾ ಅವರ ಅಣತಿಯ ಮೇರೆಗೆ ಅಲ್ಲ, ತಾವೇ ಸ್ವತಃ ಈ ನಿರ್ಧಾರ ಕೈಗೊಂಡಿದ್ದು ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದರು. ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯವನ್ನೇ ಅಸ್ತ್ರ ಮಾಡಿಕೊಂಡು ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು. ಮಧ್ಯ ಪ್ರವೇಶಿಸಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತೀನ್ ಗಡ್ಕರಿ ಅವರು ಯಾವುದೇ ರೀತಿಯ ಬಹಿರಂಗ ಹೇಳಿಕೆ ನೀಡದಂತೆ ಸುಷ್ಮಾ ಅವರಿಗೆ ತಾಕೀತು ಮಾಡಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications