ಜಂಟಿ ಅಧಿವೇಶನದಲ್ಲಿ ವಿಶ್ವಾಸಮತ ಕೋರಲು ಬಿಜೆಪಿ ನಿರ್ಣಯ

ಇದೇ ಸಮಯದಲ್ಲಿ ವಿಧಾನಸಭೆ ಸಭಾಪತಿ ಕೆಜಿ ಬೋಪಯ್ಯ ಅವರನ್ನು ಉಳಿಸಿಕೊಳ್ಳಲು ಶಾಸಕಾಂಗ ಸಭೆ ತೀರ್ಮಾನಕ್ಕೆ ಬಂದಿದೆ. ಆದರೆ, ಶಾಸಕರ ಅನರ್ಹತೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನಿಂದ ತರಾಟೆಗೆ ಒಳಗಾಗಿದ್ದ ಬೋಪಯ್ಯ ಅವರ ತಲೆದಂಡ ಆದರೆ ಮಾತ್ರ ಅಧಿವೇಶನದಲ್ಲಿ ಭಾಗಿಯಾಗುವುದಾಗಿ ಜಾತ್ಯತೀತ ಜನತಾದಳ ಪಟ್ಟುಹಿಡಿದಿದೆ.
ಬಿಜೆಪಿ ತನ್ನ ಪಟ್ಟು ಕೂಡ ಸಡಿಸದಿರುವುದರಿಂದ ವಿಧಾನಮಂಡಲ ಅಧಿವೇಶನವನ್ನು ಬಹಿಷ್ಕರಿಸುವುದಾಗಿ ಜೆಡಿಎಸ್ ಹೇಳಿದೆ. ಇಷ್ಟು ಮಾತ್ರವಲ್ಲ, ಅಧಿವೇಶನವನ್ನು ವಿರೋಧಿಸಿ ವಿಧಾನಸೌಧದ ಎದುರಿನಲ್ಲೇ 'ಅಣಕು ವಿಧಾನಸಭೆ ಅಧಿವೇಶನ' ನಡೆಸಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುಪ್ರೀಂ ಕೋರ್ಟಿನಿಂದ ಟೀಕೆಗೊಳಗಾಗಿರುವ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸುವ ಅಧಿವೇಶದಲ್ಲಿ ಭಾಗವಹಿಸುವುದು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದಂತೆ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಜೆಡಿಎಸ್ ನ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಕಾಂಗ್ರೆಸ್ ನಿರ್ಧರಿಸಿದೆ. ಅಧಿವೇಶನದಲ್ಲಿ ಭಾಗವಹಿಸುವ ಬಗ್ಗೆಯೂ ಯಾವುದೇ ತೀರ್ಮಾನ ಕಾಂಗ್ರೆಸ್ ತೆಗೆದುಕೊಂಡಿಲ್ಲ.
2010ರ ಅಕ್ಟೋಬರ್ ನಲ್ಲಿ ನಡೆಸಲಾಗಿದ್ದ ಜಂಟಿ ಅಧಿವೇಶನ ರಣರಂಗವಾಗಿ ಮಾರ್ಪಟ್ಟಿತ್ತು. ಭಿನ್ನಮತದ ಹೊಗೆಯೆಬ್ಬಿಸಿದ್ದ ಶಾಸಕರನ್ನು ಯಡಿಯೂರಪ್ಪ ಅಣತಿಯ ಮೇರೆಗೆ ಅನರ್ಹಗೊಳಿಸಲಾಗಿತ್ತು. ವಿಶ್ವಾಸಮತ ಕೋರುವಾಗ ಸಭೆಗೆ ಬರಲು ಅವಕಾಶವನ್ನೇ ನೀಡಲಿಲ್ಲ ಎಂದು ಕಾಂಗ್ರೆಸ್ ಗಲಾಟೆಯೆಬ್ಬಿಸಿತ್ತು. ಗೂಳಿಹಟ್ಟಿ ಶೇಖರ್ ಅಂಗಿ ಹರಿದುಕೊಂಡು ಸಭೆಗೆ ಅಪಮಾನವೆಸಗಿದ್ದರು.
ಮಂಡನೆಯಾಗುತ್ತಿರುವ ವಿಧೇಯಕಗಳು
* ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ - 2007
* ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ)(ತಿದ್ದುಪಡಿ) ವಿಧೇಯಕ - 2001
* ಕರ್ನಾಟಕ ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ - 2011
* ಕರ್ನಾಟಕ ರಾಜ್ಯ ನವೀನಾತ್ಮಕ ವಿಶ್ವವಿದ್ಯಾಲಯ ವಿಧೇಯಕ - 2011
* ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ (ಕ್ರಷರ್ಗಳ) ವಿನಿಮಯದ ಹಾಗೂ ನಿಯಂತ್ರಣ ವಿಧೇಯಕ - 2011
* ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ - 2011
* ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ - 2011
* (ಕರ್ನಾಟಕ ಪ್ರಾದೇಶಿಕ ಕಾನೂನುಗಳ) ನಿರಸನಗೊಳಿಸುವ ವಿಧೇಯಕ - 2011
* ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗ (ತಿದ್ದುಪಡಿ) ವಿಧೇಯಕ - 2011
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications