ನಾಗರಬಾವಿ ಡಿನೋಟಿಫಿಕೇಶನ್: ಹೈಕೋರ್ಟ್ ನೋಟಿಸ್

BSY
ಬೆಂಗಳೂರು, ಜೂನ್ 1: ನಾಗರಬಾವಿ ಮೊದಲನೇ ಹಂತದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಹಗರಣ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಲು ಆದೇಶಿಸಿದೆ. ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ.

ನಾಗರಬಾವಿ ಮೊದಲ ಹಂತದ ಬಡಾವಣೆ ನಿರ್ಮಾಣಕ್ಕೆ ಸುಮಾರು 5.13 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವ ವಿವಾದ ಇದಾಗಿದೆ. 1982ರಲ್ಲಿನ ಪ್ರಾಥಮಿಕ ಅಧಿಸೂಚನೆ ಹಾಗೂ 1985ರ ಅಂತಿಮ ಅಧಿಸೂಚನೆಗಳನ್ನು ಪ್ರಶ್ನಿಸಿ ಬೆಂಗಳೂರು ನಗರ ಸಹಕಾರಿ ಬ್ಯಾಂಕ್ ನೌಕರರ ಸಂಘ ಈ ಹಿಂದೆ ಅರ್ಜಿ ಸಲ್ಲಿಸಿತ್ತು.

ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಕ್ಕೆ ಬಾಕಿ ಇರುವ ಮಧ್ಯೆಯೇ ಅಕ್ಟೋಬರ್ 19ರಂದು ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದು, ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ (ಡಿನೋಟಿಫೈ) ಕೈಬಿಟ್ಟಿತು.

ಆದೇಶವನ್ನು ಹಿಂದಕ್ಕೆ ಪಡೆದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿದ ಸರ್ಕಾರದ ಪರ ವಕೀಲರ ವಾದವನ್ನು ನ್ಯಾಯಮೂರ್ತಿಗಳು ತಳ್ಳಿ ಹಾಕಿದರು. ಈ ಮಧ್ಯೆ, ಡಿನೋಟಿಫಿಕೇಷನ್ ಆದೇಶವನ್ನು ಜಮೀನಿನ ಮಾಲೀಕರು ಪ್ರಶ್ನಿಸಿದ್ದಾರೆ. ಎಲ್ಲ ಪ್ರಕರಣಗಳ ವಿಚಾರಣೆಗಳನ್ನು ನ್ಯಾಯಾಲಯ ಒಟ್ಟಿಗೆ ನಡೆಸಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+