ಇಷ್ಟಕ್ಕೂ ಪಕ್ಷೇತರ ಶಾಸಕರು ಏನಾದರು ?

ಗುರುವಾರ ನಡೆದ ವಿಶ್ವಾಸಮತ ಯಾಚನೆ ಸಂದರ್ಭ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ದಾರಿಯಲ್ಲೇ ಸಭಾತ್ಯಾಗ ಮಾಡಿದ ಪಕ್ಷೇತರ ಶಾಸಕರು ಬಿಜೆಪಿ ಸರ್ಕಾರದಿಂದ ಅಂತರ ಕಾಪಾಡಿಕೊಳ್ಳಲು ಉದ್ದೇಶಿಸಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಜತೆಗೂ ಗುರುತಿಸಿಕೊಳ್ಳದಿರುವ ದೃಢ ನಿರ್ಧಾರ ತೆಗೆದುಕೊಂಡಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯೊಂದಿಗೆ ಅಂತರ ಕಾಪಾಡಿಕೊಳ್ಳದೆ ಬೇರೆ ದಾರಿಯೇ ಇರಲಿಲ್ಲ. ಬೆಂಬಲ ಕೋರಿ ಬಿಜೆಪಿಯೂ ಮನವಿ ಮಾಡಿಲ್ಲ. ಹೀಗಿರುವಾಗ ತಾವಾಗಿಯೇ ಬೆಂಬಲ ನೀಡುತ್ತೇವೆ ಎಂದು ಮುಂದೆ ಹೋಗಲು ಪಕ್ಷೇತರರಿಗೂ ಮನಸ್ಸಿಲ್ಲ. ಈ ಎಲ್ಲ ಹಿನ್ನೆಲೆಯಲ್ಲಿ ಪ್ರತ್ಯೇಕ ಕೂಟವೊಂದನ್ನು ರಚಿಸಿಕೊಳ್ಳುವ ಮೂಲಕ ಒಗ್ಗಟ್ಟು ಕಾಪಾಡಿಕೊಳ್ಳಲು ಮುಂದಾಗಿದ್ದಾರೆ.
ಅಲ್ಲದೆ, ಸದನದಲ್ಲಿ ಸರ್ಕಾರಕ್ಕಾಗಲಿ ಅಥವಾ ಪ್ರತಿಪಕ್ಷಗಳಿಗಾಗಲಿ ವಿಷಯಾಧಾರಿತ ಬೆಂಬಲ ನೀಡುವ ತೀರ್ಮಾನವನ್ನೂ ಈ ಪಕ್ಷೇತರ ಶಾಸಕರು ಮಾಡಿದ್ದಾರೆ. ಜನಪರ ಕಾಳಜಿಯನ್ನು ಮುಂದಿಟ್ಟುಕೊಂಡು ಆಯಾ ಸಂದರ್ಭಕ್ಕೆ ತಕ್ಕಂತೆ ತಮ್ಮ ಅಭಿಪ್ರಾಯದ ಬೆಂಬಲ ನೀಡುವುದಾಗಿ ಪಕ್ಷೇತರ ಶಾಸಕ ಸುಧಾಕರ್ ಹೇಳಿದ್ದಾರೆ.
ಗುರವಾರ ವಿಧಾನಸಭೆಗೆ ಆಗಮಿಸುವ ಮುನ್ನ ಪಕ್ಷೇತರ ಶಾಸಕರಾದ ಡಿ.ಸುಧಾಕರ್, ಶಿವರಾಜ್ ತಂಗಡಗಿ, ವೆಂಕಟರಮಣಪ್ಪ, ಪಿ.ಎಂ.ನರೇಂದ್ರಸ್ವಾಮಿ ಹಾಗೂ ಗೂಳಿಹಟ್ಟಿ ಶೇಖರ್ ಒಟ್ಟಾಗಿ ಮೊದಲಿಗೆ ಚಾಲುಕ್ಯ ವೃತ್ತದ ಬಳಿಯ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ವಿಧಾನಸೌಧದ ಆವರಣ ಪ್ರವೇಶಿಸಿ ಬಾಬು ಜಗಜೀವನರಾಂ, ಅಂಬೇಡ್ಕರ್, ಮಾಜಿ ಮುಖ್ಯಮಂತ್ರಿಗಳಾದ ದೇವರಾಜು ಅರಸು ಹಾಗೂ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ವಿಧಾನಸಭೆಗೆ ಆಗಮಿಸಿದಾಗಲೂ ಅತ್ಯಂತ ವಿನಮ್ರತೆಯ ಭಾವದಲ್ಲಿದ್ದ ಈ ಶಾಸಕರು ಕಲಾಪ ಆರಂಭಕ್ಕೂ ಮೊದಲು ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ಸಿನ ಕೆಲವು ಸದಸ್ಯರೊಂದಿಗೆ ಉಭಯ ಕುಶಲೋಪರಿ ನಡೆಸಿದರು. ಕೆಲವು ಶಾಸಕರು ಇವರಿಗೆ ಕೈಕುಲುಕುವ ಮೂಲಕ ಅಭಿನಂದನೆಗಳನ್ನೂ ಸಲ್ಲಿಸಿದರು. ಒಟ್ಟಿನಲ್ಲಿ ತಿರುಗಿ ವಿಧಾನಸಭೆಗೆ ಬಂದೆವಲ್ಲ ಸಾಕು ಎಂಬ ನಿಟ್ಟುಸಿರಿನೊಂದಿಗೆ ಪಕ್ಷೇತರ ಶಾಸಕರು ಕಲಾಪ ಮುಗಿಸಿ ವಾಪಸಾದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications