ಎಂಎಲ್ಸಿ ಕೋಟ ಪೂಜಾರಿ ಹತ್ಯೆ ಸಂಚು:ಇಬ್ಬರ ಬಂಧನ

ಹೊಸನಗರ ನಿವಾಸಿ ರಾಘವೇಂದ್ರ ಮತ್ತು ಸಿದ್ದಾಪುರದ ಬಶೀರ್ ಬಂಧಿತರು. ಜೈಲಿನಲ್ಲಿರು ಸಂತೋಷ್ ಮತ್ತು ತ್ರಾಸಿಯ ರಾಘವೇಂದ್ರ ಕೊಲೆಗಡುಕರಿಗೆ ನೆರವಾಗಿದ್ದರು ಎನ್ನಲಾಗಿದೆ. ಕರಾವಳಿಯಲ್ಲಿ 'ಮಿಸ್ಟರ್ ಕ್ಲೀನ್" ಎನ್ನುವ ಇಮೇಜ್ ಹೊಂದಿರುವ ಶ್ರೀನಿವಾಸ ಪೂಜಾರಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎನ್ನುವ ಮಾಹಿತಿಯೇ ಕುತೂಹಲಕಾರಿಯಾಗಿದೆ. ಅತ್ಯಂತ ಸಜ್ಜನಿಕೆಯ ಪೂಜಾರಿ ಅವರ ಮೇಲೆ ಯಾವ ಕಾರಣಕ್ಕೆ ಇವರಿಗೆ ದ್ವೇಷ ಎನ್ನುವುದು ಬಹಿರಂಗವಾಗಿಲ್ಲ.
***
ಉದ್ಯೋಗ ಕೊಡುವಂತೆ ಸಂತ್ರಸ್ತರ ಸತ್ಯಾಗ್ರಹ: ಮಂಗಳೂರು ವಿಶೇಷ ಆರ್ಥಿಕ ವಲಯ (MSEZ) ದಿಂದ ಸಂತ್ರಸ್ತರಾದವರ ಮಕ್ಕಳಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ನಿರ್ವಸಿತರ ಮಕ್ಕಳು ಸತ್ಯಾಗ್ರಹ ನಡೆಸುತ್ತಿದ್ದಾರೆ. ಭೂಸ್ವಾಧೀನ ಮಾಡುವ ಮೊದಲೇ ಈ ಬಗ್ಗೆ ಒಪ್ಪಂದವಾಗಿತ್ತು, ಆದರೆ ಈಗ ಆ ಒಪ್ಪಂದವನ್ನು ಮುರಿಯಲಾಗಿದೆ ಎಂದು ಆರೋಪಿಸಿ ನಿರ್ವಸಿತರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ನಿರ್ವಸಿತರಾದವರ ಮಕ್ಕಳಿಗೆ ಅವರ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡುವ ಕುರಿತು ಮಾರ್ಗಸೂಚಿ ಸಿದ್ದಪಡಿಸಲಾಗಿದೆ. ಆದರೆ ಇಂಥ ಮಾರ್ಗಸೂಚಿ ಸಿದ್ದಪಡಿಸುವಾಗ ಸಂಬಂಧಪಟ್ಟ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು ಎಂದು ವಿಧಾನ ಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕ ಅಭಯಚಂದ್ರ ಜೈನ್ ಹೇಳಿದ್ದಾರೆ. ಅಧಿಕಾರಿಗಳು ತಮಗೆ ಬೇಕಾದಂತೆ ಮಾರ್ಗ ಸೂಚಿ ಮಾಡಿಕೊಂಡಿದ್ದಾರೆ, ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ನಿರತರ ನೇತೃತ್ವ ವಹಿಸಿರುವ ಸತ್ಯಜಿತ್ ಸುರತ್ಕಲ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications