ಜಂಬುನಾಥ ದೇಗುಲಕ್ಕೆ ಅಕ್ರಮ ಗಣಿಗಾರಿಕೆ ಪೆಟ್ಟು

ಜಂಬುನಾಥ ಬೆಟ್ಟದಲ್ಲಿರುವ ಐತಿಹಾಸಿಕ ಪ್ರಸಿದ್ಧಿ ಜಂಬುನಾಥ ದೇವಸ್ಥಾನದ ಸುತ್ತಲೂ ಅವ್ಯಾಹತವಾಗಿ ನಡೆಯುತ್ತಿರುವ ಗಣಿಗಾರಿಕೆಯಿಂದ ದೇವಸ್ಥಾನ ಶಿಥಿಲವಾಗಿ ಭಕ್ತರ ಶ್ರದ್ಧೆ - ಭಕ್ತಿಗಳಿಗೆ ಅಸಮಾಧಾನ ಉಂಟಾಗುತ್ತಿದೆ ಎಂದು ಸುಪ್ರೀಂಕೋರ್ಟ್ನಲ್ಲಿ ದಾಖಲಿಸಲಾಗಿದ್ದ ಸಾರ್ವಜನಿಕ ಹಿತಾಶಕ್ತಿ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಭಾರತೀಯ ಪುರಾತತ್ವ ಇಲಾಖೆಗೆ ಸೂಚಿಸಿತ್ತು.
ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳ ತಂಡ, ರಾಜ್ಯ ಪುರಾತತ್ವ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪುರಾತತ್ವ ತಜ್ಞರ ತಂಡ ಸೋಮವಾರ ಬೆಳಗ್ಗೆ ೧೦ ಗಂಟೆ ಸುಮಾರಿಗೆ 'ಹಂಪೆ ಪ್ರದೇಶಾಭಿವೃದ್ಧಿ ಪ್ರಾಧಿಕಾರ"ದ ಸಭಾಂಗಣದಲ್ಲಿ ಸಭೆ ನಡೆಸಿ, ಸಾಕಷ್ಟು ದಾಖಲೆಗಳನ್ನು ಪರಿಶೀಲಿಸಿ ಜಂಬುನಾಥ ಗುಡ್ಡ ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ್ದ ತಂಡದ ಸದಸ್ಯರು ಜಂಬುನಾಥ ದೇವಸ್ಥಾನ ಸೇರಿ ಸ್ಮಾರಕಗಳನ್ನು ವಿವರವಾಗಿ ಪರಿಶೀಲಿಸಿ, ಛಾಯಾಚಿತ್ರ ತೆಗೆದರು.
ಆ ನಂತರ ದೇವಸ್ಥಾನದ ಅರ್ಚಕ ಆನಂದ ಸ್ವಾಮಿ, ಅಲ್ಲಿಯ ನಿವಾಸಿ ಶಿಲ್ಪ ಅವರಿಂದ ಗಣಿಗಾರಿಕೆಯ ಕುರಿತು ಮಾಹಿತಿ ಸಂಗ್ರಹ ಮಾಡಿದರು. ದೇವಸ್ಥಾನದ ಗರ್ಭಗುಡಿ, ಕಂಭಗಳು, ನೀರು ಕಾಣದ ಬಾವಿ, ಸ್ಥಳ ಮಹಿಮೆ, ಐತಿಹಾಸಿಕ - ಧಾರ್ಮಿಕ ಶಕ್ತಿಗಳ ಮಾಹಿತಿಗಳನ್ನು ಪಡೆದು, ಗಣಿಗಾರಿಕೆಯಿಂದ ದೇವಸ್ಥಾನದಲ್ಲಿ ಉಂಟಾಗಿರುವ ಬಿರುಕುಗಳನ್ನು ಪರಿಶೀಲಿಸಿ ದಾಖಲಿಸಿಕೊಂಡರು.
ಜಂಬುನಾಥನ ಬೆಟ್ಟದಲ್ಲಿ ದೇವಸ್ಥಾನಕ್ಕೆ ಪಕ್ಕದಲ್ಲೇ ಆರ್. ಪೊಂಪಾಪತಿ (ಆರ್ಪಿಪಿ) ಮೈನ್ಸ್ ಕಂಪನಿ ಗಣಿಗಾರಿಕೆ ನಡೆಸುತ್ತಿದ್ದು, ಈ ಪ್ರದೇಶಕ್ಕೆ ತೆರಳಿದ ತಂಡ ಸದಸ್ಯರು ಗಣಿ ಗುತ್ತಿಗೆದಾರರಿಂದ ಸಾಕಷ್ಟು ಮಾಹಿತಿಯನ್ನು ಸಂಗ್ರಹ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈ ತಂಡದ ಸದಸ್ಯರು, ಸುಪ್ರೀಂಕೋರ್ಟ್ ೩ ತಿಂಗಳಲ್ಲಿ ವರದಿ ಸಲ್ಲಿಸಲು ತಿಳಿಸಿದೆ. ಈ ಹಿನ್ನಲೆಯಲ್ಲಿ ವಿವಿಧ ಹಂತಗಳಲ್ಲಿ ಅಧಿಕಾರಿಗಳ, ಸಾರ್ವಜನಿಕರ ಹಾಗೂ ಭಕ್ತರ ಸಭೆಗಳನ್ನು ನಡೆಸಿ ಈ ಕುರಿತು ವರದಿ ಸಲ್ಲಿಸಲಾಗುತ್ತದೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications