ಕನ್ನಡ ಕಲಿಯಲು ಕನ್ನೇಡತರರಿಗೆ ಒಂದು ವರ್ಷ ಗಡುವು

ಅಂದರೆ ಕರ್ನಾಟಕಕ್ಕೆ ಬಂದ ಒಂದು ವರ್ಷದೊಳಗಾಗಿ 7ನೇ ತರಗತಿ ಪರೀಕ್ಷೆ ಪಾಸು ಮಾಡುವುದು ಅನಿವಾರ್ಯವಾಗಲಿದೆ. ಈ ಪ್ರಸ್ತಾವನೆಯನ್ನು ಪ್ರಸಕ್ತ ಅಧಿವೇಶನದಲ್ಲೇ ಅಂಗೀಕರಿಸುವಂತೆ ಕೆಡಿಎ ಅಧ್ಯಕ್ಷ, ವಿಧಾನಮಂಡಲ ಸದಸ್ಯ 'ಮುಖ್ಯಮಂತ್ರಿ' ಚಂದ್ರು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ಐಟಿ ಉದ್ಯೋಗಿಗಳಿಗೆ ಕನ್ನಡ ಕಲಿಯುವಂತಾಗಲು ಸರಕಾರ ಅಂತರ್ಜಾಲದ ಮೂಲಕ ಕನ್ನಡ ಕಲಿಕೆ ಕೇಂದ್ರಗಳನ್ನು ತೆರೆಯಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.
'ರಾಜ್ಯದಲ್ಲಿ ಲಕ್ಷಾಂತರ ಮಂದಿ ಹೊರ ರಾಜ್ಯಗಳಿಂದ ಬಂದು ನೆಲೆ ಕಂಡುಕೊಳ್ಳುತ್ತಿದ್ದಾರೆ. ಇಲ್ಲಿನ ನೆಲ, ಜಲ, ವಾಯು ಮತ್ತಿತರ ಸಂಪನ್ಮೂಲಗಳನ್ನು ಬಳಸಿಕೊಂಡು ಜೀವನ ರೂಪಿಸಿಕೊಳ್ಳುವಾಗ ಅನಿವಾರ್ಯವಾಗಿ ಮತ್ತು ಕಡ್ಡಾಯವಾಗಿ ಇಲ್ಲಿನ ಸಂಸ್ಕೃತಿ, ಇತಿಹಾಸ ಮತ್ತು ನೆಲದ ಭಾಷೆಯನ್ನು ಅರಿಯಬೇಕು' ಎಂದು 'ಮುಖ್ಯಮಂತ್ರಿ' ಚಂದ್ರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಲು ಸಲಹೆ ನೀಡಿದ್ದೆವೆ. ಇನ್ನೊಂದು ವರ್ಷದಲ್ಲಿ ಕನಿಷ್ಠ 7ನೇ ತರಗತಿಯನ್ನು ಕನ್ನಡದಲ್ಲಿ ಪಾಸು ಮಾಡಿಬಿಡಿ ಎಂದು ಅವರು ಸೂಚಿಸಿದ್ದಾರೆ. ಜತೆಗೆ, ಟೆಲಿಕಾಂ ಸೇವಾ ಕಂಪನಿಗಳು ಮೊಬೈಲ್ ಫೋನ್ ಗಳಲ್ಲಿ ಕನ್ನಡ ಸಾಫ್ಟ್ ವೇರ್ ಬಳಕೆ ಮಾಡುವಂತೆ ನಿರ್ದೇಶಿಸಬೇಕು ಎಂದು ಕೆಡಿಎ ಹೇಳಿದೆ. ಪ್ರಸ್ತಾವನೆಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆದ್ಯತೆಯ ಮೇರೆಗೆ ಅತಿ ಶೀಘ್ರದಲ್ಲೇ ಸಲಹೆಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications