ಮಾತೃಪಕ್ಷಕ್ಕೆ ವಾಪಸಾದ ಉಮಾ ಭಾರತಿ

ಇತ್ತೀಚೆಗೆ ಲಕ್ನೋದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಮುಂದಿನ ವರ್ಷ ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ಪ್ರದೇಶದಲ್ಲಿ ಪಕ್ಷದ ಪರ ಪ್ರಚಾರ ಕಾರ್ಯಭಾರವನ್ನು ಉಮಾಗೆ ವಹಿಸಲಾಗಿದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಮೊಹಮದ್ ಅಲಿ ಜಿನ್ನಾ ಅವರನ್ನು ಎಲ್.ಕೆ. ಅಡ್ವಾಣಿ ಅವರು ತಮ್ಮ ಪುಸ್ತಕದಲ್ಲಿ ಹಾಡಿಹೊಗಳಿದ್ದನ್ನು ಉಮಾ ತೀವ್ರವಾಗಿ ಖಂಡಿಸಿದ್ದರು. ಅಡ್ವಾಣಿ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆಯೂ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಅವರನ್ನು ಉಚ್ಛಾಟಿಸಿತ್ತು. ಬಳಿಕ ಉಮಾ ಭಾರತೀಯ ಜನಶಕ್ತಿ ಪಕ್ಷವನ್ನು ಸ್ಥಾಪಿಸಿದ್ದರು.











Click it and Unblock the Notifications