ಸಿರುಗುಪ್ಪ ಸರ್ಕಾರಿ ವೈದ್ಯನಿಗೆ ಬಿತ್ತು ಬೇಜಾನ್ ಗೂಸಾ

ಸಿರುಗುಪ್ಪದ 21ನೇ ವಾರ್ಡ್ನ ಕಸ್ತೂರಿಗೆ ಮಂಗಳವಾರ ಬೆಳಗ್ಗೆ ೯ಗಂಟೆಗೆ ಮನೆಯಲ್ಲಿ ನಾಗರಹಾವು ಕಚ್ಚಿದೆ. ತಕ್ಷಣವೇ ಬಾಲಕಿಯನ್ನು ಪಟ್ಟಣದ ನೂರು ಹಾಸಿಗೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಯಿತು. ವೈದ್ಯರು ಬಾಲಕಿಯ ಸಂಬಂಧಿಕರಿಗೆ ಹಾವು ಕಡಿದ ಔಷದಿಯನ್ನು ಹೊರಗಡೆ ತರುವಂತೆ ಸಣ್ಣದೊಂದು ಚೀಟಿಯಲ್ಲಿ ಬರೆದುಕೊಟ್ಟರು.
ಕಸ್ತೂರಿಯ ಪೋಷಕರು ಔಷದಿಯನ್ನು ೨ ಸಾವಿರ ರುಪಾಯಿ ಪಾವತಿಸಿ ತಂದರು. ವೈದ್ಯರು ಇಂಜೆಕ್ಷನ್ ನೀಡಿದರು. ಆದರೂ, ಬಾಲಕಿ ಮತ್ತಷ್ಟು ಅಸ್ವಸ್ತಳಾದಳು. ಗಾಭರಿಗೊಂಡ ವೈದ್ಯ ಆಂಬುಲೆನ್ಸ್ನಲ್ಲಿ ಕಸ್ತೂರಿಯನ್ನು ತರಾತುರಿಯಾಗಿ ಬಳ್ಳಾರಿಗೆ ಕಳುಹಿಸುವ ಏರ್ಪಾಟು ಮಾಡಿದರು. ಆದರೆ, ಕಸ್ತೂರಿ ಮಾರ್ಗ ಮಧ್ಯೆ ಮೃತಪಟ್ಟಳು.
ರೊಚ್ಚಿಗೆದ್ದ ಜನ: ವೈದ್ಯರ ಕರ್ತವ್ಯ ಮತ್ತು ಸೇವಾ ನಿರ್ಲಕ್ಷ್ಯದ ಕಾರಣ ಕಸ್ತೂರಿ ಮೃತಪಟ್ಟಿದ್ದಾಳೆ ಎಂದು ರೊಚ್ಚಿಗೆದ್ದ ಸುತ್ತಮುತ್ತಲಿನ ಮನೆಯವರು ಹಾಗೂ ಸಂಬಂಧಿಗಳು ಶವವನ್ನು ಮನೆಗೆ ಸೇರಿಸಿ, ಆಸ್ಪತ್ರೆಯ ಮುಂದೆ ಧರಣಿ ನಡೆಸಿದರು. ಧರಣಿ ನಿರತರನ್ನು ಮಾತನಾಡಿಸಲು ವೈದ್ಯರು ಆಗಮಿಸದ ಕಾರಣ ರೊಚ್ಚಿಗೆದ್ದ ಅವರು ಆಸ್ಪತ್ರೆಯ ಒಳಗೆ ನುಗ್ಗಿ ಸ್ಥಳದಲ್ಲಿಯೇ ಇದ್ದ ವೈದ್ಯಾಧಿಕಾರಿ ಸಂಪತ್ಕುಮಾರ್, ವೈದ್ಯರಾದ ಜಗನ್ನಾಥ, ರವೀಂದ್ರನಾಥರನ್ನು ಕೈಗೆ ಸಿಕ್ಕಿದ್ದನ್ನು ತೆಗೆದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮುಖ್ಯ ವೈದ್ಯಾಧಿಕಾರಿ ಸಂಪತ್ ಕುಮಾರ್ ಮಾತನಾಡಿ ಹಾವು ಕಚ್ಚಿದ ಬಾಲಕಿಯನ್ನು ಆಸ್ಪತ್ರೆಗೆ ಕರೆತಂದ ಕೂಡಲೇ ಸೇವೆಯಲ್ಲಿದ್ದ ವೈದ್ಯ ಡಾ. ಈರಣ್ಣ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ನಂತರ ಬಾಲಕಿಯ ಪರಿಸ್ಥಿತಿಯನ್ನು ಗಮನಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಗೆ ಕಳುಹಿಸಿದ್ದಾರೆ. ಆದರೆ ಬಾಲಕಿಯು ಮೃತಪಟ್ಟಿದ್ದಾಳೆ. ಆದರೆ ಜನರು ನನ್ನ ಬಳಿ ಯಾವುದೇ ಮಾಹಿತಿಯನ್ನು ಕೇಳದೆ ಏಕಾಏಕಿ ಕಚೇರಿಗೆ ನುಗ್ಗಿ ನನ್ನನು ಸೇರಿ ಇತರೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯ ಉಪಕರಣಗಳನ್ನು ಧ್ವಂಸ ಮಾಡಿದ್ದಾರೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications