ಬೆಂಗಳೂರು ಬಳಿ ಸಾಧ್ವಿ ರೀತಾಂಬರಾ 'ವಾತ್ಸಲ್ಯ ಗ್ರಾಮ'

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ರೀತಾಂಬರಾ ಅವರು, 'ವಾತ್ಸಲ್ಯ ಗ್ರಾಮ' ಯೋಜನೆ ಅಡಿಯಲ್ಲಿ ಅನಾಥಾಶ್ರಮ, ಅಬಲಾಶ್ರಮ, ವೃದ್ಧಾಶ್ರಮಗಳೆಲ್ಲ ಒಂದೇ ಸ್ಥಳದಲ್ಲಿ ಸ್ಥಾಪನೆಯಾಗಲಿದೆ ಎಂದು ನುಡಿದರು. ರಾಮಲೀಲಾ ಮೈದಾನದಲ್ಲಿ ಬಾಬಾ ರಾಮದೇವ್ ಉಪವಾಸ ಸತ್ಯಾಗ್ರಹ ಕೂತಿದ್ದಾಗ ಇದೇ ರೀತಾಂಬರಾ ಬೆಂಬಲ ನೀಡಿದ್ದು ಅನೇಕ ಆಕ್ರೋಶಕ್ಕೆ ಕಾರಣವಾಗಿತ್ತು.
ಮೊದಲ ವಾತ್ಸಲ್ಯ ಗ್ರಾಮವನ್ನು ದೆಹಲಿಯಲ್ಲಿ, ನಂತರ ಉತ್ತರ ಪ್ರದೇಶದ ವೃಂದಾವನ, ಮಧ್ಯ ಪ್ರದೇಶದ ಓಂಕಾರೇಶ್ವರ, ಹಿಮಾಚಲ ಪ್ರದೇಶದ ನಾಲಗಢದಲ್ಲಿ ಸ್ಥಾಪಿಸಲಾಗಿದೆ. ಗುಜರಾತ್ ಬಳಿಯ ಸಾನಂದದಲ್ಲಿಯೂ ಐದನೇ ವಾತ್ಸಲ್ಯ ಗ್ರಾಮ ಸ್ಥಾಪಿಸಲಾಗುತ್ತಿದೆ. ಆರನೆಯ ವಾತ್ಸಲ್ಯ ಗ್ರಾಮ ಬೆಂಗಳೂರು ಬಳಿ ಅನಾಥರಿಗೆ ಆಶ್ರಯ ತಾಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಹೇಳಿದರು.
ವಾತ್ಸಲ್ಯ ಗ್ರಾಮದಲ್ಲಿರುವವರೆಲ್ಲ ಒಂದೇ ಕುಟುಂಬದ ಅಣ್ಣ ತಮ್ಮಂದಿರಂತೆ, ಅಕ್ಕ ತಂಗಿಯರಂತೆ ಮಾನವೀಯತೆಯ ಬಂಧವನ್ನು ಬೆಸೆಯಲಿದ್ದಾರೆ. ಭಾವನಾತ್ಮಕವಾಗಿ ಯಾವುದೇ ರೀತಿಯ ಕೊರತೆ ಆಗದಂತೆ ಅವರನ್ನು ಅಲ್ಲಿ ನೋಡಿಕೊಳ್ಳಲಾಗುವುದು. ಅಮೆರಿಕ, ಇಂಗ್ಲೆಂಡ್ ಮತ್ತಿತರ ರಾಷ್ಟ್ರಗಳಲ್ಲಿ ಇಂಥ ಪರಿಕಲ್ಪನೆ ಜನಪ್ರಿಯತೆ ಪಡೆದಿದೆ ಎಂದು ಸಾಧ್ವಿ ರೀತಾಂಬರಾ ವಿವರಿಸಿದರು.
ಅನಾಥರಿಗೆ ಬರೀ ಒಂದು ತುತ್ತಿನ ಅನ್ನ ಹಾಕಿದರೆ ಸಾಲದು. ವಿದ್ಯಾರ್ಥಿಗಳಿಗೆ ವಿದ್ಯೆ, ವೃತ್ತಿಪರ ತರಬೇತಿ, ದೊರೆಯಬೇಕು. ಅವರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲುವಂತೆ ಅವರ ವ್ಯಕ್ತಿತ್ವವನ್ನು ರೂಪಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿರುತ್ತದೆ ಎಂದು ಯೋಜನೆಯ ರೂಪುರೇಷೆಗಳನ್ನು ಅವರು ತಿಳಿಸಿದರು.
ವಾತ್ಸಲ್ಯ ಗ್ರಾಮ ಅನಾಥರಿಗೆ ಕಾಲ ಕಳೆಯುವ ತಾಣವಾಗಿರುವುದಿಲ್ಲ. ಬದಲಿಗೆ, ವಿದ್ಯಾರ್ಥಿಗಳಿಗೆ ಶಾಲೆ, ಮನೆಗಳು, ಮಕ್ಕಳಿಗೆ ಆಟವಾಡಲು ಮೈದಾನ, ದೇಗುಲಗಳು, ಗೋಶಾಲೆ, ವ್ಯಕ್ತಿತ್ವ ವಿಕಸನ ಕೇಂದ್ರ, ಆಸ್ಪತ್ರೆ, ವೃತ್ತಿಪರ ತರಬೇತಿ ಸಂಸ್ಥೆ, ಆಧ್ಯಾತ್ಮಿಕ ಕೇಂದ್ರಗಳು ತಲೆಯೆತ್ತಲಿವೆ. ಬಡವರ, ನಿರ್ಗತಿಕರ, ಪರಿತ್ಯಕ್ತರ ಬಾಳು ಬಂಗಾರ ಮಾಡುವುದೇ ವಾತ್ಸಲ್ಯ ಗ್ರಾಮ ಸ್ಥಾಪನೆಯ ಉದ್ದೇಶವಾಗಲಿದೆ ಎಂದು ಅವರು ಹೇಳಿದರು.
ಯಾರು ರೀತಾಂಬರಾ? : ಪಂಜಾಬ್ ನ ಬಡ ರೈತ ಕುಟುಂಬಕ್ಕೆ ಸೇರಿರುವ ಸಾಧ್ವಿ ರೀತಾಂಬರಾ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ ನ ಕ್ರಿಯಾಶೀಲ ಸದಸ್ಯೆ. ಹಿಂದೂ ಪರ ಮತ್ತು ಮುಸ್ಲಿಂ ವಿರೋಧಿ. ಸಿಡಿಲಿನ ಮಾತುಗಾರಿಕೆ ಅವರಿಗೆ ಒಲಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ನ ಮಹಿಳಾ ಪಡೆ (ಆರ್ಮಿ ಆಫ್ ದುರ್ಗಾ) ಸ್ಥಾಪಿಸಿರುವ ರೀತಾಂಬರಾ 1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಮುಖ ಆರೋಪಿ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications