ಬೆಂಗಳೂರು ಬಳಿ ಸಾಧ್ವಿ ರೀತಾಂಬರಾ 'ವಾತ್ಸಲ್ಯ ಗ್ರಾಮ'

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿದ್ದ ರೀತಾಂಬರಾ ಅವರು, 'ವಾತ್ಸಲ್ಯ ಗ್ರಾಮ' ಯೋಜನೆ ಅಡಿಯಲ್ಲಿ ಅನಾಥಾಶ್ರಮ, ಅಬಲಾಶ್ರಮ, ವೃದ್ಧಾಶ್ರಮಗಳೆಲ್ಲ ಒಂದೇ ಸ್ಥಳದಲ್ಲಿ ಸ್ಥಾಪನೆಯಾಗಲಿದೆ ಎಂದು ನುಡಿದರು. ರಾಮಲೀಲಾ ಮೈದಾನದಲ್ಲಿ ಬಾಬಾ ರಾಮದೇವ್ ಉಪವಾಸ ಸತ್ಯಾಗ್ರಹ ಕೂತಿದ್ದಾಗ ಇದೇ ರೀತಾಂಬರಾ ಬೆಂಬಲ ನೀಡಿದ್ದು ಅನೇಕ ಆಕ್ರೋಶಕ್ಕೆ ಕಾರಣವಾಗಿತ್ತು.
ಮೊದಲ ವಾತ್ಸಲ್ಯ ಗ್ರಾಮವನ್ನು ದೆಹಲಿಯಲ್ಲಿ, ನಂತರ ಉತ್ತರ ಪ್ರದೇಶದ ವೃಂದಾವನ, ಮಧ್ಯ ಪ್ರದೇಶದ ಓಂಕಾರೇಶ್ವರ, ಹಿಮಾಚಲ ಪ್ರದೇಶದ ನಾಲಗಢದಲ್ಲಿ ಸ್ಥಾಪಿಸಲಾಗಿದೆ. ಗುಜರಾತ್ ಬಳಿಯ ಸಾನಂದದಲ್ಲಿಯೂ ಐದನೇ ವಾತ್ಸಲ್ಯ ಗ್ರಾಮ ಸ್ಥಾಪಿಸಲಾಗುತ್ತಿದೆ. ಆರನೆಯ ವಾತ್ಸಲ್ಯ ಗ್ರಾಮ ಬೆಂಗಳೂರು ಬಳಿ ಅನಾಥರಿಗೆ ಆಶ್ರಯ ತಾಣವಾಗಲಿದೆ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಹೇಳಿದರು.
ವಾತ್ಸಲ್ಯ ಗ್ರಾಮದಲ್ಲಿರುವವರೆಲ್ಲ ಒಂದೇ ಕುಟುಂಬದ ಅಣ್ಣ ತಮ್ಮಂದಿರಂತೆ, ಅಕ್ಕ ತಂಗಿಯರಂತೆ ಮಾನವೀಯತೆಯ ಬಂಧವನ್ನು ಬೆಸೆಯಲಿದ್ದಾರೆ. ಭಾವನಾತ್ಮಕವಾಗಿ ಯಾವುದೇ ರೀತಿಯ ಕೊರತೆ ಆಗದಂತೆ ಅವರನ್ನು ಅಲ್ಲಿ ನೋಡಿಕೊಳ್ಳಲಾಗುವುದು. ಅಮೆರಿಕ, ಇಂಗ್ಲೆಂಡ್ ಮತ್ತಿತರ ರಾಷ್ಟ್ರಗಳಲ್ಲಿ ಇಂಥ ಪರಿಕಲ್ಪನೆ ಜನಪ್ರಿಯತೆ ಪಡೆದಿದೆ ಎಂದು ಸಾಧ್ವಿ ರೀತಾಂಬರಾ ವಿವರಿಸಿದರು.
ಅನಾಥರಿಗೆ ಬರೀ ಒಂದು ತುತ್ತಿನ ಅನ್ನ ಹಾಕಿದರೆ ಸಾಲದು. ವಿದ್ಯಾರ್ಥಿಗಳಿಗೆ ವಿದ್ಯೆ, ವೃತ್ತಿಪರ ತರಬೇತಿ, ದೊರೆಯಬೇಕು. ಅವರು ತಮ್ಮ ಸ್ವಂತ ಕಾಲ ಮೇಲೆ ನಿಲ್ಲುವಂತೆ ಅವರ ವ್ಯಕ್ತಿತ್ವವನ್ನು ರೂಪಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿರುತ್ತದೆ ಎಂದು ಯೋಜನೆಯ ರೂಪುರೇಷೆಗಳನ್ನು ಅವರು ತಿಳಿಸಿದರು.
ವಾತ್ಸಲ್ಯ ಗ್ರಾಮ ಅನಾಥರಿಗೆ ಕಾಲ ಕಳೆಯುವ ತಾಣವಾಗಿರುವುದಿಲ್ಲ. ಬದಲಿಗೆ, ವಿದ್ಯಾರ್ಥಿಗಳಿಗೆ ಶಾಲೆ, ಮನೆಗಳು, ಮಕ್ಕಳಿಗೆ ಆಟವಾಡಲು ಮೈದಾನ, ದೇಗುಲಗಳು, ಗೋಶಾಲೆ, ವ್ಯಕ್ತಿತ್ವ ವಿಕಸನ ಕೇಂದ್ರ, ಆಸ್ಪತ್ರೆ, ವೃತ್ತಿಪರ ತರಬೇತಿ ಸಂಸ್ಥೆ, ಆಧ್ಯಾತ್ಮಿಕ ಕೇಂದ್ರಗಳು ತಲೆಯೆತ್ತಲಿವೆ. ಬಡವರ, ನಿರ್ಗತಿಕರ, ಪರಿತ್ಯಕ್ತರ ಬಾಳು ಬಂಗಾರ ಮಾಡುವುದೇ ವಾತ್ಸಲ್ಯ ಗ್ರಾಮ ಸ್ಥಾಪನೆಯ ಉದ್ದೇಶವಾಗಲಿದೆ ಎಂದು ಅವರು ಹೇಳಿದರು.
ಯಾರು ರೀತಾಂಬರಾ? : ಪಂಜಾಬ್ ನ ಬಡ ರೈತ ಕುಟುಂಬಕ್ಕೆ ಸೇರಿರುವ ಸಾಧ್ವಿ ರೀತಾಂಬರಾ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ ನ ಕ್ರಿಯಾಶೀಲ ಸದಸ್ಯೆ. ಹಿಂದೂ ಪರ ಮತ್ತು ಮುಸ್ಲಿಂ ವಿರೋಧಿ. ಸಿಡಿಲಿನ ಮಾತುಗಾರಿಕೆ ಅವರಿಗೆ ಒಲಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ನ ಮಹಿಳಾ ಪಡೆ (ಆರ್ಮಿ ಆಫ್ ದುರ್ಗಾ) ಸ್ಥಾಪಿಸಿರುವ ರೀತಾಂಬರಾ 1992 ಡಿಸೆಂಬರ್ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಮುಖ ಆರೋಪಿ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications