ದಲಿತ ವಿರೋಧಿ ಪೇಜಾವರ ಶ್ರೀಗಳ ವಿರುದ್ಧ ಪ್ರತಿಭಟನೆ!

ಪೇಜಾವರ ಶ್ರೀಗಳ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಅವರ ದಲಿತ ವಿರೋಧಿ ನೀತಿಯನ್ನು ಖಂಡಿಸುತ್ತೇವೆ. ಜಾತಿ ಮತ್ತು ಅಸ್ಪಶ್ಯತೆ ಹಿಂದೂ ಧರ್ಮದ ಆತ್ಮ ಇದ್ದಂತೆ. ಜಾತಿ ನಾಶ ಮಾಡುವುದು ಎಂದರೆ ಹಿಂದೂ ಧರ್ಮವನ್ನು ನಾಶ ಮಾಡಿದಂತೆ. ದಲಿತರು ಬೌದ್ಧ ಧರ್ಮ ಸ್ವೀಕರಿಸುವುದರಿಂದ ಅಸ್ಪಶೃತೆ ನಾಶವಾಗುವುದು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೂವಪ್ಪ ಮಾಸ್ತರ್ ತಿಳಿಸಿದ್ದಾರೆ.
'ಜಾತಿ ಮತ್ತು ಅಸ್ಪಶ್ಯತೆ ಹಿಂದೂ ಧರ್ಮದ ಅವಿಭಾಜ್ಯ ಅಂಗ" ಎಂದು ಹೇಳಿರುವ ಪೇಜಾವರ ಶ್ರೀ ವಿಶ್ವೇಶತೀರ್ಥರ ಹೇಳಿಕೆ ಅಸ್ಪೃಶ್ಯತೆಯನ್ನು ಬೆಂಬಲಿಸುತ್ತಿದ್ದು, ಅವರನ್ನು ಅಸ್ಪಶ್ಯತಾ ಕಾಯ್ದೆಯಡಿಯಲ್ಲಿ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾಸ್ತರ್ ಹೇಳಿದರು.












Click it and Unblock the Notifications